ಚಾಮರಾಜನಗರ: ಗಾರೆ ಕೆಲಸಗಾರರನ್ನು ಕರೆದೊಯ್ಯುತ್ತಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಒಬ್ಬ ಸಾವನ್ನಪ್ಪಿ ಹತ್ತು ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಕಮರವಾಡಿ ಗೇಟ್ ಬಳಿ ನಡೆದಿದೆ.
ಕೆಲಸಗಾರರನ್ನು ಹೊತ್ತೊಯ್ಯುತ್ತಿದ್ದ ಅಶೋಕ್ ಲೇಲ್ಯಾಂಡ್ನ ದೋಸ್ತ್ ಎಂಬ ಪಿಕ್ಅಪ್ ವಾಹನ ಮೈಸೂರಿನಿಂದ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮಕ್ಕೆ ಕಾರ್ಮಿಕರು ಹೋಗುತ್ತಿದ್ದರು.
ಎಂದಿನಂತೆ ಗಾರೆ ಕೆಲಸ ಮುಗಿಸಿಕೊಂಡು ಹಿಂತಿರುಗುತ್ತಿದ್ದ ವೇಳೆ ಚಾಮರಾಜನಗರ ತಾಲೂಕಿನ ಕಮರವಾಡಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯ ಹಳ್ಳಕ್ಕೆಮಗುಚಿ ಬಿದ್ದಿದೆ ಪರಿಣಾಮ ಗಂಭೀರ ಗಾಯಗೊಂಡ ಒಬ್ಬ ಸಾವನ್ನಪ್ಪಿದರೆ ಉಳಿದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸ್ಥಳಕ್ಕೆ ಸಂತೇಮರಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.