ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಫಾರಿ ಆರಂಭಿಸಿದ್ದಾರೆ. ಉದ್ಯಾನವನದಲ್ಲಿ 2 ಗಂಟೆಗಳ ಕಾಲ ಸುಮಾರು 20 ಕಿ.ಮೀ. ಸಂಚಾರ ನಡೆಸಲಿದ್ದಾರೆ.
ತಮಿಳುನಾಡಿನ ಮುದುಮಲೈ ಅರಣ್ಯಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೆಳ್ಳಿ-ಬೊಮ್ಮನ್ ದಂಪತಿಯನ್ನು ಭೇಟಿಯಾಗಿ ಸನ್ಮಾನಿಸಲಿದ್ದಾರೆ. ದಿ ಎಲಿಫೆಂಟ್ ವಿಸ್ಪರರ್ಸ್ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ. ಬೆಳ್ಳಿ-ಬೊಮ್ಮನ್ ದಂಪತಿ ಸಾಕ್ಷ್ಯಚಿತ್ರದ ಪಾತ್ರಧಾರಿಗಳಾಗಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಹೆಲಿಪ್ಯಾಡ್ನಿಂದ ರಸ್ತೆ ಮುಖಾಂತರ ಬಂಡೀಪುರ ಕ್ಯಾಂಪ್ಗೆ ಆಗಮಿಸಿದರು. ಈ ವೇಳೆ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಿದರು. ನಂತರ ಬಂಡೀಪುರ ಕ್ಯಾಂಪಸ್ನಿಂದ ಸುಮಾರು 2 ತಾಸು ಅರಣ್ಯದಲ್ಲಿ ಸಫಾರಿ ಪ್ರಾರಂಭಿಸಿದರು.