ಚಾಮರಾಜನಗರ: ಮೇಗಲಹುಂಡಿಯ ವಿಚಾರಣಾಧೀನ ಕೈದಿ ಸುರೇಶ್ ಎಂಬಾತ ಹಲವು ಕಳ್ಳತನ ಪ್ರಕರಣಗಳ ಹಿನ್ನಲೆ ಚಾಮರಾಜನಗರ ಜೈಲಿನಲ್ಲಿದ್ದ. ತಮಿಳುನಾಡಿನ ಕಳ್ಳತನ ಪ್ರಕರಣವೊಂದರಲ್ಲಿ ವಿಚಾರಣೆಗೆಂದು ಉಪ ಕಾರಾಗೃಹದಿಂದ ತಮಿಳುನಾಡು ಸತ್ಯಮಂಗಲಂ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಈತ ಎಸ್ಕೇಪ್ ಆಗಿದ್ದಾನೆ.
ತಮಿಳುನಾಡಿನ ಹಾಸನೂರು ಬಳಿ ಟೀ ಕುಡಿಯುವಾಗ ಚಾಮರಾಜನಗರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರಿಗೆ ಚಳ್ಳೇಹಣ್ಣು ತಿನಿಸಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಈಗ ಈತನ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.