News Karnataka Kannada
Friday, May 17 2024
ಚಾಮರಾಜನಗರ

ಚಾಮರಾಜನಗರ: ಸಾರಿಗೆ ಬಸ್‌ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳಗ್ಗೆ ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ಸೌಕರ್ಯವಿಲ್ಲ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಕೆ.ಎಸ್. ಆರ್. ಟಿ ಸಿ ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
Photo Credit : NewsKarnataka

ಚಾಮರಾಜನಗರ : ಬೆಳಗ್ಗೆ ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ಸೌಕರ್ಯವಿಲ್ಲ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಕೆ.ಎಸ್. ಆರ್. ಟಿ ಸಿ ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಕಾಲೇಜುಗಳಿಗೆ ತೆರಳಲು ಸಕಾಲದಲ್ಲಿ ಬಸ್ ಸೌಲಭ್ಯವಿಲ್ಲ ಎಂದು ಹಲವಾರು ಭಾರಿ ಅಧಿಕಾರಿಗಳಿಗೆ ದೂರು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

1

ಸ್ಥಳಕ್ಕೆ ಬಂದ ಹನೂರು ಪೊಲೀಸರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ವಾಗ್ವಾದಕ್ಕಿಳಿದರು. ಪ್ರತಿಭಟನೆಯಿಂದಾಗಿ ಹನೂರು ಮಹದೇಶ್ವರ ಬೆಟ್ಟದ ಮಾರ್ಗ ಕೆಲ ಘಂಟೆಗಳ ಕಾಲ ವಾಹನ ಸಂಚಾರವಿಲ್ಲದೆ ಪ್ರಯಾಣಿಕರು, ಭಕ್ತರು ಉರಿ ಬಿಸಿಲಿನಲ್ಲಿ ಬಸ್ ನಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು