ಚಾಮರಾಜನಗರ: ಜಿಲ್ಲೆಯ ಪಡಿತರ ಚೀಟಿ ಹೊಂದಿರುವ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ವಿವರಗಳೊಂದಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಈವರೆಗೆ ಮೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಇ-ಕೆವೈಸಿ ಮಾಡಲು ಅವಕಾಶವಿತ್ತು. ಪ್ರಸ್ತುತ ಜೂನ್ 2022ರ ಮಾಹೆಯಿಂದ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪೋರ್ಟೆಬಿಲಿಟಿ ಮುಖಾಂತರ ಇ-ಕೆವೈಸಿ ಮಾಡಬಹುದಾಗಿದೆ. ಈವರೆಗೆ ವಲಸೆ ಹೋಗಿ ಅಥವಾ ಬೇರೆ ಜಿಲ್ಲೆಯಲ್ಲಿ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಮೂಲ ನ್ಯಾಯಬೆಲೆ ಅಂಗಡಿಗಳಿಗೆ ಬಂದು ಇ-ಕೆವೈಸಿ ಮಾಡಿಸಿರುವುದಿಲ್ಲ ಇಂತವರಿಗೆ ಅನುಕೂಲವಾಗಲು ಸರ್ಕಾರವು ಪೋರ್ಟೆಬಿಲಿಟಿಯಲ್ಲಿ ಇ-ಕೆವೈಸಿಯನ್ನು ಮಾಡಲು ಅವಕಾಶ ಕಲ್ಪಿಸಿದೆ.
ಈವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಾವು ವಾಸಿಸುವ ಸಮಿಪದ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಆಗಸ್ಟ್ ತಿಂಗಳವರೆಗೂ ಅವಕಾಶವಿದ್ದು ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಯಾವುದೇ ನ್ಯಾಯಬೆಲೆ ಅಂಗಡಿಗಲ್ಲಿ ಇ-ಕೆವೈಸಿ ಮಾಡಬಹುದಾಗಿದೆ.
ಪಡಿತರ ಚೀಟಿದಾರರ ಎಲ್ಲಾ ಸದಸ್ಯರು ತಮ್ಮ ಬಯೋದೃಢೀಕರಣ ಮಾಡಿಸಬೇಕು. ಆಧಾರ್ ಸಂಖ್ಯೆ, ಫೋನ್ ನಂಬರ್, ಗ್ಯಾಸ್ ಹೊಂದಿರುವ ಮಾಹಿತಿ ಹಾಗೂ ಕುಟುಂಬ ಸದಸ್ಯರ ಸಹ ಸಂಬಂಧವನ್ನು ಇ-ಕೆವೈಸಿಯಲ್ಲಿ ನಮೂದಿಸಬೇಕು. ಪಡಿತರ ಚೀಟಿದಾರರಿಗೆ ಅಂತಿಮ ಅವಕಾಶವಾಗಿದ್ದು, ಈ ತಿಂಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳಿನಿAದ ಪಡಿತರ ವಿತರಣೆ ರದ್ದಾಗಬಹುದು.
ಚಾಮರಾಜನಗರ ಜಿಲ್ಲೆಯಲ್ಲಿ 2,89,833 ಪಡಿತರ ಚೀಟಿಗಳಿದ್ದು, ಅದರಲ್ಲಿ 875098 ಸದಸ್ಯರಿರುತ್ತಾರೆ. ಇದರಲ್ಲಿ 801319 ಸದಸ್ಯರು ಇ-ಕೆವೈಸಿ ಮಾಡಿಸಿರುತ್ತಾರೆ. ಉಳಿದ 73779 ಸದಸ್ಯರು ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಯೋಗಾನಂದ ಅವರು ತಿಳಿಸಿದ್ದಾರೆ.