ಚಾಮರಾಜನಗರ: ವಿದ್ಯಾರ್ಥಿಗಳು ವಿದ್ಯಾಭ್ಯಾಸ ವೇಳೆ ರಾಜಕೀಯದಿಂದ ದೂರವಿದ್ದು, ಕ್ರೀಡೆ, ಸಾಂಸ್ಕೃತಿಕ ಹಾಗೂ ಸೇವಾ ಚಟುವಟಿಕೆಗೆ ಆದ್ಯತೆ ನೀಡಿ ಎಂದು ಚಾಮರಾಜನಗರ ಜೆಎಸ್ಎಸ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಗೋವಿಂದ ಶೆಟ್ಟಿ ಕಿವಿಮಾತು ಹೇಳಿದರು.
ಚಾಮರಾಜನಗರ ಜೋಡಿ ರಸ್ತೆಯಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನೆ ಹಾಗೂ ಏಡ್ಸ್ ಜಾಗೃತಿ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಕೆಲವು ವಿದ್ಯಾರ್ಥಿಗಳು ರಾಜಕೀಯ ಚಟುವಟಿಕೆಯಲ್ಲಿ ಭಾಗವಹಿಸಲು ಕಾಲೇಜುಗಳಲ್ಲಿ ಗೈರು ಹಾಜರಾಗುತ್ತಿದ್ದಾರೆ. ಇದರಿಂದ ಅವರ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದವರು.
ಎನ್ಎಸ್ಎಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರೆ ಗ್ರಾಮೀಣ ಪರಿಸರದಲ್ಲಿ ಸಮಾಜ ಸೇವೆ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬಹುದು. ಇದರ ಜೊತೆ ರಾಷ್ಟ್ರಪ್ರೇಮ ಹಾಗೂ ಉನ್ನತ ಮಟ್ಟದ ಅಧಿಕಾರಿ ಆಗುವ ಆಸೆ ಈಡೇರುತ್ತದೆ ಎಂದು ತಿಳಿಸಿದರು
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಿಳಾ ಕಾಲೇಜು ಪ್ರಾಂಶುಪಾಲ ಜಿ ಸಿದ್ದರಾಜು ಮಾತನಾಡಿ.ವಿದ್ಯಾರ್ಥಿಗಳು ಸೇವಾ ಮನೋಭಾವನೆ ಅಭ್ಯಾಸ ಮಾಡಿಕೊಂಡರೆ. ಅವರ ಬಾಳು ಬಂಗಾರವಾಗುತ್ತದೆ. ಎನ್ಎಸ್ಎಸ್ ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ, ತಾಳ್ಮೆ, ಶಿಸ್ತು. ಸೇವಾ ಮನೋಭಾವನೆ. ರಾಷ್ಟ್ರಪ್ರೇಮ. ವಿದ್ಯಾರ್ಥಿಗಳೊಂದಿಗೆ ಉತ್ತಮ ಒಡನಾಟ. ಬೆಳೆಸಿಕೊಂಡು ಭವ್ಯ ಭಾರತ ನಿರ್ಮಾಣ ಮಾಡಲು ಕಲಿಸುತ್ತದೆ. ಜೆ ಎಸ್ ಎಸ್ ಶಿಕ್ಷಣ ಸಂಸ್ಥೆ ಆಧ್ಯಾತ್ಮಿಕ, ಸೇವೆ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಉತ್ತಮ ಪ್ರಶಸ್ತಿ ಗಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು .