News Karnataka Kannada
Friday, May 03 2024
ಚಾಮರಾಜನಗರ

ಚಾಮರಾಜನಗರ: ವಿದ್ಯಾರ್ಥಿಗಳು ರಾಜಕೀಯ ಕ್ಷೇತ್ರದಿಂದ ದೂರವಿರಿ- ಡಾ.ಗೋವಿಂದ ಶೆಟ್ಟಿ

Chamarajanagar: Students should stay away from politics: Dr. Govinda Shetty
Photo Credit : By Author

ಚಾಮರಾಜನಗರ: ವಿದ್ಯಾರ್ಥಿಗಳು ವಿದ್ಯಾಭ್ಯಾಸ ವೇಳೆ ರಾಜಕೀಯದಿಂದ ದೂರವಿದ್ದು, ಕ್ರೀಡೆ, ಸಾಂಸ್ಕೃತಿಕ ಹಾಗೂ ಸೇವಾ ಚಟುವಟಿಕೆಗೆ ಆದ್ಯತೆ ನೀಡಿ ಎಂದು ಚಾಮರಾಜನಗರ ಜೆಎಸ್ಎಸ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಗೋವಿಂದ ಶೆಟ್ಟಿ ಕಿವಿಮಾತು ಹೇಳಿದರು.

ಚಾಮರಾಜನಗರ ಜೋಡಿ ರಸ್ತೆಯಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನೆ ಹಾಗೂ ಏಡ್ಸ್ ಜಾಗೃತಿ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಕೆಲವು ವಿದ್ಯಾರ್ಥಿಗಳು ರಾಜಕೀಯ ಚಟುವಟಿಕೆಯಲ್ಲಿ ಭಾಗವಹಿಸಲು ಕಾಲೇಜುಗಳಲ್ಲಿ ಗೈರು ಹಾಜರಾಗುತ್ತಿದ್ದಾರೆ. ಇದರಿಂದ ಅವರ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದವರು.

ಎನ್ಎಸ್ಎಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರೆ ಗ್ರಾಮೀಣ ಪರಿಸರದಲ್ಲಿ ಸಮಾಜ ಸೇವೆ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬಹುದು. ಇದರ ಜೊತೆ ರಾಷ್ಟ್ರಪ್ರೇಮ ಹಾಗೂ ಉನ್ನತ ಮಟ್ಟದ ಅಧಿಕಾರಿ ಆಗುವ ಆಸೆ ಈಡೇರುತ್ತದೆ ಎಂದು ತಿಳಿಸಿದರು

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಿಳಾ ಕಾಲೇಜು ಪ್ರಾಂಶುಪಾಲ ಜಿ ಸಿದ್ದರಾಜು ಮಾತನಾಡಿ.ವಿದ್ಯಾರ್ಥಿಗಳು ಸೇವಾ ಮನೋಭಾವನೆ ಅಭ್ಯಾಸ ಮಾಡಿಕೊಂಡರೆ. ಅವರ ಬಾಳು ಬಂಗಾರವಾಗುತ್ತದೆ. ಎನ್ಎಸ್ಎಸ್ ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ, ತಾಳ್ಮೆ, ಶಿಸ್ತು. ಸೇವಾ ಮನೋಭಾವನೆ. ರಾಷ್ಟ್ರಪ್ರೇಮ. ವಿದ್ಯಾರ್ಥಿಗಳೊಂದಿಗೆ ಉತ್ತಮ ಒಡನಾಟ. ಬೆಳೆಸಿಕೊಂಡು ಭವ್ಯ ಭಾರತ ನಿರ್ಮಾಣ ಮಾಡಲು ಕಲಿಸುತ್ತದೆ. ಜೆ ಎಸ್ ಎಸ್ ಶಿಕ್ಷಣ ಸಂಸ್ಥೆ ಆಧ್ಯಾತ್ಮಿಕ, ಸೇವೆ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಉತ್ತಮ ಪ್ರಶಸ್ತಿ ಗಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು