ಚಾಮರಾಜನಗರ: ಕೃಷಿ ಪಂಪ್ ಸೆಟ್ ಕೇಬಲ್ ಕಳವಿಗೆ ಬಂದ ಇಬ್ಬರು ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಘಟನೆ ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಈ ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಗ್ರಾಮದ ಜಮೀನೊಂದರ ಬಳಿ ಅನುಮಾಸ್ಪದವಾಗಿ ಮಾರುತಿ ಕಾರನ್ನು ನಿಲ್ಲಿಸಿಕೊಂಡಿದ್ದ ಗ್ರಾಮಸ್ಥರನ್ನು ಕಂಡೊಡನೆ ಕಾರನ್ನು ಬಿಟ್ಟು ಓಡಿ ಹೋಗಿದ್ದಾರೆ. ಬುಧವಾರ ಬೆಳಿಗ್ಗೆ ಕಾರನ್ನು ತೆಗೆದುಕೊಂಡು ಹೋಗಲು ಬಂದಿದ್ದ ಇಬ್ಬರನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ನಂತರ ಪೋಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಬಂಧಿತರನ್ನು ಜಿಲ್ಲೆಯ ಶನಿವಾರಸಂತೆ ಸಮೀಪದ ಕಿರುಬಿಳಹ ನಿವಾಸಿ ಸಂದೀಪ ಮತ್ತು ಮೂದರವಳ್ಳಿ ಗ್ರಾಮದ ಪ್ರದೀಪ ಎಂದು ಗುರುತಿಸಲಾಗಿದೆ.
ಮುಕ್ಕಡಹಳ್ಳಿ ಗ್ರಾಮದ ನಾಗಣ್ಣ ಎಂಬುವರ ಜಮೀನಿನ ಬಳಿ ರಾತ್ರಿ 11 ಗಂಟೆಯ ಸುಮಾರಿಗೆ ಪ್ರದೀಪ ಮತ್ತು ಸಂದೀಪ ಕಾರು ನಿಲ್ಲಿಸಿ ಬೋರ್ ವೆಲ್ಗೆ ಸಂಪರ್ಕಿಸಿರುವ ವಿದ್ಯುತ್ ಕೇಬಲ್ ಇರುವ ಜಾಗದ ಹತ್ತಿರ ನಿಂತಿದ್ದರು ಎನ್ನಲಾಗಿದೆ. ಊರಿನವರು ಗುಂಪುಗೂಡಿದಾಗ ಕಾರು ಬಿಟ್ಟು ಇಬ್ಬರೂ ಪರಾರಿಯಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಪೋಲೀಸ್ ಇನ್ಸ್ಪೆಕ್ಟರ್ ಚಿಕ್ಕರಾಜ ಶೆಟ್ಟಿ ಅವರು ಗ್ರಾಮಸ್ಥರು ಇಬ್ಬರೂ ವಿದ್ಯುತ್ ಕೇಬಲ್ ಕಳ್ಳತನ ಮಾಡಲು ಬಂದಿರುವ ಬಗ್ಗೆ ದೂರನ್ನು ನೀಡಿದ್ದು ಗ್ರಾಮಾಂತರ ಪೋಲೀಸರು ಐಪಿಸಿ ಸೆಕ್ಷನ್ 379 ಹಾಗೂ 511 ಅನ್ವಯ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದರು. ಆದರೆ ಮತ್ತೊಂದು ಮೂಲದ ಪ್ರಕಾರ ಆರೋಪಿಗಳು ಹಂದಿ ಬೇಟೆಗೆ ತೆರಳಿದ್ದರೆಂದು ಹೇಳಲಾಗುತಿದ್ದು ಯಾವುದೇ ಆಯುಧ ಕಾರಿನಲ್ಲಿ ಪತ್ತೆ ಆಗಿಲ್ಲ. ಈ ಕುರಿತು ಪೋಲೀಸರು ತನಿಖೆ ನಡೆಸುತಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…