ಚಾಮರಾಜನಗರ: ನಮ್ಮ ಮತ ನಮ್ಮ ಹಕ್ಕು, ಬೆರಳಿಗೆ ಇಂಕು ಪ್ರಜಾಪ್ರಭುತ್ವಕ್ಕೆ ಲಿಂಕು, ನನ್ನ ಮತ ನನ್ನ ಭವಿಷ್ಯ ಎಲ್ಲಾ ಕೆಲಸಗಳನ್ನು ಬಿಡಿ ತಪ್ಪದೆ ಮತದಾನ ಮಾಡಿ ಹೀಗೆ ಹತ್ತಾರು ಘೋಷಣೆಗಳನ್ನು ಹಿಡಿದು ಯಳಂದೂರು ಪಟ್ಟಣದ ಪ್ರಮುಖ ರಸ್ತೆಯಲ್ಲಿ ತಪ್ಪದೇ ಮತದಾನದ ಮಾಡುವಂತೆ ಅರಿವು ಮೂಡಿಸುವ ಜಾಥಾ ನಡೆಸಲಾಯಿತು.
ಯಳಂದೂರು ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ಆರ್. ಉಮೇಶ್ ಅವರು ಜಾಥಾಗೆ ಚಾಲನೆ ನೀಡಿದರು.
ತಾಲೂಕು ಪಂಚಾಯಿತಿ ಕಚೇರಿಯಿಂದ ಹೊರಟ ಜಾಗೃತಿ ಜಾಥ ಪಟ್ಟಣದ ಬಳೇಪೇಟೆ, ನಡಮೇಗಲಮ್ಮನ ದೇವಸ್ಥಾನ ಹಾಗೂ ಬಸ್ ನಿಲ್ದಾಣ ಹೀಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಬಿ.ಎಸ್.ಎನ್.ಎಲ್ ಕಚೇರಿ ಮುಂಭಾಗ ಮಾನವ ಸರಪಳಿ ರಚಿಸಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಇದೇ ಸಂದರ್ಭದಲ್ಲಿ ತಹಶೀಲ್ದಾರರಾದ ಯಮುನಪ್ಪ ತಳವಾರ್, ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ರವಿಕಿರಣ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಕೇಶವಮೂರ್ತಿ, ಸಿ.ಡಿ.ಪಿ.ಓ ತಿಬ್ಬಯ್ಯ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯ ನಿರ್ದೇಶಕರಾದ ರಾಜು, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರಾದ ಸರಿತಾ ಕುಮಾರಿ, ಉಪ ನೋಂದಣಿ ಅಧಿಕಾರಿ ರುದ್ರಯ್ಯ, ತಾಲೂಕು ಹಿಂದುಳಿದ ವರ್ಗಗಳ ವಿಸ್ತಾರಣಾಧಿಕಾರಿ ಮಲ್ಲಿಕಾರ್ಜುನ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ವೇತಾ, ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯ ಸಂರಕ್ಷಣಾಧಿಕಾರಿ ಸಂಪತ್ತು, ಸಹಾಯಕ ನಿರ್ದೇಶಕರಾದ (ಗ್ರಾ.ಉ) ಗಂಗಾಧರ್, ತಾಲೂಕಿನ ಎಲ್ಲಾ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಎನ್.ಆರ್.ಎಲ್.ಎಂನ ಎಂ.ಬಿ.ಕೆ ಮತ್ತು ಎಲ್.ಸಿ.ಆರ್.ಪಿಗಳು, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.