News Karnataka Kannada
Wednesday, May 01 2024
ಚಾಮರಾಜನಗರ

ಕ್ರೈಸ್ತ ಸಮುದಾಯ ಅಕ್ರಮವಾಗಿ ಗೋರಿ ನಿರ್ಮಾಣ ಮಾಡಿಲ್ಲ: ಜೋಸ್ವಾ ಪ್ರಸನ್ನ ಕುಮಾರ್ ಸ್ಪಷ್ಟನೆ

ಸರ್ಕಾರಿ ಜಾಗದಲ್ಲಿ ಕ್ರೈಸ್ತ ಸಮುದಾಯದವರು ಅಕ್ರಮವಾಗಿ ಯಾವುದೇ ಗೋರಿಗಳನ್ನು ನಿರ್ಮಾಣ ಮಾಡಿಲ್ಲ ಎಂದು ಸೆಂಟ್ ಪೀಟರ್ಸ್ ಲೂಥರನ್ ಚರ್ಚ್‍ನ ಫಾದರ್ ಜೋಸ್ವಾ ಪ್ರಸನ್ನ ಕುಮಾರ್ ಸ್ಪಷ್ಟಪಡಿಸಿದರು.
Photo Credit : NewsKarnataka

ಗುಂಡ್ಲುಪೇಟೆ : ಸರ್ಕಾರಿ ಜಾಗದಲ್ಲಿ ಕ್ರೈಸ್ತ ಸಮುದಾಯದವರು ಅಕ್ರಮವಾಗಿ ಯಾವುದೇ ಗೋರಿಗಳನ್ನು ನಿರ್ಮಾಣ ಮಾಡಿಲ್ಲ ಎಂದು ಸೆಂಟ್ ಪೀಟರ್ಸ್ ಲೂಥರನ್ ಚರ್ಚ್‍ನ ಫಾದರ್ ಜೋಸ್ವಾ ಪ್ರಸನ್ನ ಕುಮಾರ್ ಸ್ಪಷ್ಟಪಡಿಸಿದರು.

ಪಟ್ಟಣದ ಸೆಂಟ್ ಪೀಟರ್ಸ್ ಚರ್ಚ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ವಿಜಯಪುರ ಸರ್ವೆ ನಂಬರ್ 102, 62, 61 ಮತ್ತು 105 ರ ಮಧ್ಯೆ ಇರುವ ಸರ್ಕಾರಿ ರಸ್ತೆ ಮತ್ತು ರಾಜ ಕಾಲುವೆಯಲ್ಲಿ ಕ್ರೈಸ್ತ ಸಮುದಾಯದವರು ಅಕ್ರಮವಾಗಿ ಗೋರಿಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದು ನಿವಾಸಿಗರು ಆರೋಪಿಸಿದ್ದಾರೆ.

ಆದರೆ ಸರ್ವೆ ನಂ-101ರಲ್ಲಿ ಸೇಂಟ್ ಪೀಟರ್ಸ್ ಲೂಥರನ್ ಚರ್ಚ್‍ನವರಿಗೆ 20 ಗುಂಟೆ ಜಾಗವನ್ನು 2000 ಇಸವಿಯಲ್ಲಿ ಕೊಳ್ಳೇಗಾಲ ಉಪ ವಿಭಾಗದ ಉಪ ವಿಭಾಗಾಧಿಕಾರಿಗಳು ಮಂಜೂರು ಮಾಡಿ ಸ್ಮಶಾನವಾಗಿ ಬಳಸಲು ಆದೇಶ ಹೊರಡಿಸಿದ್ದಾರೆ.

ಅಂದಿನಿಂದ ಇಂದಿನವರೆಗೂ ಸೇಂಟ್ ಪೀಟರ್ಸ್ ಲೂಥರನ್ ಚರ್ಚ್‍ನ ಸದಸ್ಯರು ಹಾಗೂ ಇತರೆ ಕ್ರೈಸ್ತರು ಅದನ್ನು ಬಳಸಿಕೊಂಡು ಬರುತ್ತಿದ್ದು, ಮೃತಪಟ್ಟ ಕ್ರೈಸ್ತರ ಶವ ಸಂಸ್ಕಾರವನ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.

20 ಗುಂಟೆ ಜಾಗವನ್ನು ಸರ್ಕಾರ ಕ್ರೈಸ್ತ ಸಮುದಾಯಕ್ಕೆ ಸ್ಮಶಾನವಾಗಿ ಬಳಸಲು ಅಧಿಕೃತವಾಗಿ ನೀಡಿದೆ. ಹೀಗಾಗಿ ಅದನ್ನು ಅನಧಿಕೃತವಾಗಿ ಬಳಸುತ್ತಿದ್ದಾರೆ ಎಂಬ ನಿವಾಸಿಗರ ಆರೋಪದಲ್ಲಿ ಹುರುಳಿಲ್ಲ. ಅದು ಸ್ಮಶಾನಕ್ಕೆಂದೆ ಸರ್ಕಾರ ನೀಡಿರುವ ಸ್ಥಳವಾಗಿರುವ ಕಾರಣ ಶವಸಂಸ್ಕಾರ ಮಾಡಲು ಹಾಗೂ ಗೋರಿಗಳನ್ನು ಕಟ್ಟಲು ಅವಕಾಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಅಧಿಕೃತ ದಾಖಲೆಗಳಿದೆ ಎಂದು ಹೇಳಿದರು.

ಶವ ಸಂಸ್ಕಾರ ಮಾಡುವುದನ್ನು ಹಾಗೂ ಗೋರಿ ಕಟ್ಟುವುದನ್ನು ಪ್ರಶ್ನಿಸಲು ಹೋದ ಸ್ಥಳೀಯ ನಿವಾಸಿಗಳ ಮೇಲೆ ಕ್ರೈಸ್ತ ಸಮುದಾಯದವರು ದಬ್ಬಾಳಿಕೆ ಮಾಡಿ, ಬೆದರಿಕೆ ಹಾಕಿ, ಹಲ್ಲೆ ಮಾಡಲು ಮುಂದಾಗುತ್ತಿದ್ದಾರೆ ಎಂಬ ಆರೋಪ ಮಾಡಲಾಗಿದೆ.

ಆದರೆ ಗುಂಡ್ಲುಪೇಟೆಯ ಇತಿಹಾಸದಲ್ಲೇ ಕ್ರೈಸ್ತ ಸಮುದಾಯದವರು ಹೀಗೆ ದಬ್ಬಾಳಿಕೆ ಮಾಡಿ, ಬೆದರಿಕೆ ಹಾಕಿ, ಹಲ್ಲೆ ನಡೆಸಲು ಮುಂದಾದ ಉದಾಹರಣೆಗಳಿಲ್ಲ. ಕ್ರೈಸ್ತ ಸಮುದಾಯವು ಶಾಂತಿ, ಸಮಾಧಾನ, ಸಹನೆಗೆ ಹೆಸರಾಗಿದೆ, ನಮ್ಮಿಂದ ಇಂತಹ ಯಾವುದೇ ಕೃತ್ಯಗಳು ಜರುಗಿಲ್ಲ ಎಂದು ಸ್ಪಷ್ಟಪಡಿಸಿದರು.

ಆ ಜಾಗದಲ್ಲಿ ಸ್ಮಶಾನದಲ್ಲಿ ಶವಸಂಸ್ಕಾರ ಮಾಡುವುದು ಹಾಗೂ ಗೋರಿಗಳನ್ನು ಕಟ್ಟುವ ಪ್ರಕ್ರಿಯೆಯಲ್ಲಿ ಸಹ ಯಾವುದೇ ಲೋಪಗಳನ್ನು ಎಸಗಿರುವುದಿಲ್ಲ. ಬದಲಿಗೆ ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳು ರೂಪಿಸಿರುವ ಕಾನೂನು, ಚೌಕಟ್ಟಿನ ಪ್ರಕಾರ ಎಲ್ಲಾ ಪ್ರಕ್ರಿಯೆಗಳನ್ನೂ ನಡೆಸಿಕೊಂಡು ಬರಲಾಗುತ್ತಿದೆ.

ಆದ್ದರಿಂದ ಸ್ಮಶಾನದ ಜಾಗವನ್ನು ಸರ್ಕಾರವೇ ಕ್ರೈಸ್ತ ಸಮುದಾಯಕ್ಕೆ ಅಧಿಕೃತವಾಗಿ ಮಂಜೂರು ಮಾಡಿರುವ ಕಾರಣ ಪ್ರತಿಯೊಂದು ಕಾನೂನುಬದ್ಧವಾಗಿಯೇ ನಡೆಯುತ್ತಿವೆ. ಇಲ್ಲಿ ಯಾವುದೇ ಬಗೆಯ ಅನಧಿಕೃತ ಮತ್ತು ಅಕ್ರಮ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು