ಚಾಮರಾಜನಗರ: ಮಾರ್ಚ್ 12 ರಂದು ಚಾಮರಾಜನಗರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.
ನಗರದ ಡಾ.ಬಿ.ಆರ್. ಅಂಭೇಡ್ಕರ್ ಕ್ರೀಡಾಂಗಣಕ್ಕೆ ಅಧಿಕಾರಿ ಜಿಲ್ಲಾ ಗಳೊಂದಿಗೆ ತೆರಳಿದ ಸಚಿವರು ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಕುರಿತಾದ ಸಮಾವೇಶದ ಸಿದ್ಧತೆಯನ್ನು ಪರಿಶೀಲಿಸದರು. ಬಳಿಕ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಚಿವರು ತ್ವರಿತವಾಗಿ ಸಿದ್ಧತೆಗಳನ್ನು ನಡೆಸುವಂತೆ ಸೂಚನೆ ನೀಡಿದರು.