ಗುಂಡ್ಲುಪೇಟೆ: ಕೇರಳದಲ್ಲಿ ದಿನೇ ದಿನೇ ಕೊರೋನ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಇತ್ತ ಗಡಿಭಾಗಗಳಾದ ಮೂಲೆಹೊಳೆ, ಕೆಕ್ಕನಹಳ್ಳ ಬಳಿ ತಪಾಸಣೆ ಕಾರ್ಯ ತೀಕ್ಷ್ಣಗೊಂಡಿದೆ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅಲೀಮ್ ಪಾಷಾ ಸಿಬ್ಬಂದಿಗಳ ತಂಡದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕಕ್ಕೆ ಕೇರಳದಿಂದ ಮತ್ತೇ ಕೊರೋನ ಕಂಟಕ ಎದುರಾಗಲಿದೆ ಆತಂಕದ ಸುದ್ದಿ ಎದುರಾದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಡಳಿತ ಮುಂಜಾಗೃತಾ ಕ್ರಮವನ್ನ ಕೈಗೊಂಡಿದೆ. ಕೆಕ್ಕನಹಳ್ಳ ಮತ್ತು ಮೂಲೆಹೊಳೆ ಚೆಕ್ಪೋಸ್ಟ್ ಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡೋ ಪ್ರವಾಸಿಗರನ್ನ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗಡಿಭಾಗಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.