ಗುಂಡ್ಲುಪೇಟೆ: ಚಿರತೆ ದಾಳಿಗೆ ಜೋಡಿಕರುಗಳು ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕೊಡಸೋಗೆ ಗ್ರಾಮದಲ್ಲಿ ನಡೆದಿದೆ.
ಕೊಡಸೋಗೆ ಗ್ರಾಮದ ನಾಗೇಶ್ ಎಂಬವರು ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ ಹಠಾತ್ ದಾಳಿ ನಡೆಸಿದ ಚಿರತೆ ಎರಡು ಕರುಗಳನ್ನ ಬಲಿ ಪಡೆದಿದೆ, ಇತ್ತೀಚಿಗೆ ಚಿರತೆ ಕಾಟ ಮಿತಿಮೀರಿದ್ದು ಸಾರ್ವಜನಿಕರು ಜಮೀನುಗಳಿಗೆ ತೆರಳಲು ಹಿಂದೇಟು ಹಾಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ನಿರ್ಲಕ್ಸ್ಯಕ್ಕೆ ಆಕ್ರೋಶಗೊಂಡಿರುವ ರೈತರು ಚಿರತೆಯನ್ನ ಸೆರೆಹಿಡಿದು ಬೇರೆಡೆ ಸ್ಥಳಾಂತರಿಸಲು ತ್ವರಿತವಾಗಿ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.