News Karnataka Kannada
Tuesday, May 07 2024
ಚಾಮರಾಜನಗರ

ಕೋವಿಡ್ ಭೀತಿ: ಗಡಿಭಾಗದಲ್ಲಿ ಆರೋಗ್ಯ ಇಲಾಖೆ ತೀವ್ರ ತಪಾಸಣೆ

New Project 2023 12 21t160340.327
Photo Credit : News Kannada

ಗುಂಡ್ಲುಪೇಟೆ: ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಜೆ.ಎನ್ 1 ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ಮೂಲಹೊಳೆ ಚೆಕ್ ಪೋಸ್ಟ್ ನಲ್ಲಿ ಹಾದು ಹೋಗುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು‌ ಇಟ್ಟಿದ್ದು ಆರೋಗ್ಯ ಇಲಾಖೆಯ ‌ಸಿಬ್ಬಂದಿಗಳು ತೀವ್ರ ತಪಾಸಣೆ ನಡೆಸುತಿದ್ದಾರೆ.

ಕೇರಳ ‌ರಾಜ್ಯದಿಂದ ಬರುವ ಪ್ರಯಾಣಿಕರನ್ನು ತಪಾಸಣೆ ನಡೆಸಲು ಆರೋಗ್ಯ ಇಲಾಖೆಯ ವತಿಯಿಂದ ಇಬ್ಬರು ಕಮ್ಯೂನಿಟಿ ಆರೋಗ್ಯ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದ್ದು ಕೇರಳ ರಾಜ್ಯದಿಂದ ಬರುವ ಪ್ರಯಾಣಿಕರಿಗೆ ಜಾಗೃತಿ ಮೂಡಿಸುವ ಜೊತೆಗೆ ಸ್ಕೀನಿಂಗ್ ನಡೆಸಲಾಗುತ್ತಿದೆ, ನಮ್ಮ ರಾಜ್ಯದವರಿಗೆ ಕೋವಿಡ್ ಲಕ್ಷಣಗಳು ಕಂಡುಬಂದರೆ ಸ್ಥಳೀಯ ಪ್ರಾಥಮಿಕ ಆರೋಗ್ಯ ‌ಕೇಂದ್ರಕ್ಕೆ ಮಾಹಿತಿ ನೀಡಿ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ.

ಕೇರಳದಿಂದ ಬರುವ ಶಬರಿಮಲೆ ‌ಯಾತ್ರೆ ಮುಗಿಸಿ ಮೂಲೆಹೊಳೆ ಚೆಕ್‌ ಪೋಸ್ಟ್ ಮುಖಾಂತರ ಬರುವ ಜನರ ದಾಖಲಾತಿಯನ್ನು ಆರೋಗ್ಯ ಇಲಾಖೆ ಪರಿಶೀಲಿಸುತಿದ್ದು , ಜನರು ತೆರಳುವ ಆಯಾಯಾ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇವರ ಮಾಹಿತಿಯನ್ನು ಕಳುಹಿಸಲಾಗುತ್ತಿದೆ ಅಲ್ಲಿನ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಹೊರಗಿನಿಂದ ಬಂದವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಸೂಚಿಸಿದೆ.

ಕೋವಿಡ್ ಸೋಂಕು ಕಂಡುಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲು ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 5 ಬೆಡ್ ಗಳ ವಾರ್ಡ್ ಸಿದ್ದಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು