News Karnataka Kannada
Saturday, April 27 2024
ಚಾಮರಾಜನಗರ

ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿತಪ್ಪಿ ಬಂದ ಜಿಂಕೆಯ ರಕ್ಷಣೆ

Gundlupet: A deer that strayed into the town was rescued
Photo Credit : News Kannada

ಗುಂಡ್ಲುಪೇಟೆ: ದಾರಿ ತಪ್ಪಿ ಪಟ್ಟಣಕ್ಕೆ ಬಂದಿದ್ದ ಜಿಂಕೆಯೊಂದನ್ನು ಅರಣ್ಯ‌‌ ಇಲಾಖೆ ಸಿಬ್ಬಂದಿ ಸ್ಥಳೀಯರ‌‌ ಸಹಾಯದಿಂದ ಹಿಡಿದು ರಕ್ಷಣೆ ಮಾಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಪಂಜನಹಳ್ಳಿ ಜಮೀನು ಮಾರ್ಗವಾಗಿ ಕಾಡಿನಿಂದ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದು ಗಾಬರಿಯಿಂದ ಪಟ್ಟಣದ ಹೆದ್ದಾರಿ ಬದಿಯಲ್ಲಿರುವ ಕಬ್ಬಿಣದ ಅಂಗಡಿಯೊಂದರ ಒಳಗೆ‌ ನುಗ್ಗಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಜಿಂಕೆ ಹಿಂಬಾಲಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆಗಮಿಸಿದ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಬಲೆ ಮೂಲಕ ಜಿಂಕೆ ಸೆರೆ ಹಿಡಿದಿದ್ದಾರೆ.

ಸೆರೆಯಾದ ಜಿಂಕೆಗೆ ತರಚಿದ ಸಣ್ಣಪುಟ್ಟ ಗಾಯಗಳಾಗಿದ ಹಿನ್ನೆಲೆ ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಚಿಕಿತ್ಸೆ ನೀಡಿ, ನಂತರ ಬಂಡೀಪುರ ಅರಣ್ಯಕ್ಕೆ ಬಿಟ್ಟಿದ್ದಾರೆ.

ಈ ವೇಳೆ ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪ ವಲಯ ಅರಣ್ಯಾಧಿಕಾರಿ ಮುದ್ದುರಾಜು, ಭರತ್, ಸ್ಥಳೀಯರಾದ ಅರುಣ್ ಕರ್ನಾಟಕ ರಕ್ಷಣಾ ವೇದಿಕೆ ತಾ. ಅಧ್ಯಕ್ಷ ಸುರೇಶ್ ನಾಯಕ್ ಸೇರಿದಂತೆ ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು