ಚಾಮರಾಜನಗರ

ಕಳಪೆ ಬಿತ್ತನೆ ಬೀಜ ವಿತರಣೆ: ಅಂಗಡಿ ವಿರುದ್ಧ ಕ್ರಮಕ್ಕೆ ಆಗ್ರಹ

ಗುಂಡ್ಲುಪೇಟೆ: ಜಮೀನಿನಲ್ಲಿ ಮುಸುಕಿನ ಜೋಳದ ಬೀಜವನ್ನು ಬಿತ್ತನೆ ಮಾಡಿ 15 ದಿನ ಕಳೆದರೂ ಸಮರ್ಪಕವಾಗಿ ಮೊಳಕೆಯೊಡೆಯದ ಹಿನ್ನೆಲೆ ರೈತ ಕುಮಾರ್ ಆಕ್ರೋಶ ಹೊರ ಹಾಕಿ, ಕಳಪೆ ಬಿತ್ತನೆ ಬೀಜ ವಿತರಣೆ ಮಾಡಿರುವ ಅಂಗಡಿ ಹಾಗು ಕಂಪನಿ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ದುಂದಾಸನಪುರ ಗ್ರಾಮದ ರೈತ ಕುಮಾರ್ ಗುಂಡ್ಲುಪೇಟೆ ಪಟ್ಟಣದಲ್ಲಿರುವ ಸಿದ್ದಮಲ್ಲೇಶ್ವರ ಟ್ರೇಡರ್ಸ್ ನಲ್ಲಿ ಹಾಸನ ಮೂಲದ ದುರ್ಗಾ ಅಗ್ರಿಟೆಕ್ ಎಂಬುವರಿಂದ ಸರಬರಾಜಾಗಿರುವ ಮುಸುಕಿನ ಜೋಳದ ವಿರಾಟ್ 495 ಎಂಬ ಬಿತ್ತನೆ ಬೀಜವನ್ನು ಖರೀದಿಸಿ ಬಿತ್ತನೆ ಮಾಡಿದ್ದಾರೆ. ಆದರೆ ಬಿತ್ತನೆ ಮಾಡಿ ಎರಡು ವಾರ ಕಳೆದರೂ ಸಹ ಮೊಳಕೆಯೊಡೆದಿಲ್ಲ. ಇದರಿಂದ ಸಾವಿರಾರು ರೂ. ಖರ್ಚು ಮಾಡಿ ಮುಕ್ಕಾಲು ಎಕರೆ ಜಮೀನು ಹದಗೊಳಿಸಿ ಬಿತ್ತನೆ ಮಾಡಿದ್ದ ರೈತನಿಗೆ ತೀವ್ರ ನಷ್ಟ ಉಂಟಾಗಿದೆ.

ಕಳಪೆ ಮುಸುಕಿನ ಜೋಳ ಬಿತ್ತನೆ ಬೀಜ ಮಾರಾಟ ಮಾಡಿರುವ ಗುಂಡ್ಲುಪೇಟೆ ಪಟ್ಟಣದ ಸಿದ್ದಮಲ್ಲೇಶ್ವರ ಟ್ರೇಡರ್ಸ್ ಮಾಲೀಕರನ್ನು ಕೇಳಿದರೆ ಉಢಾಫೆ ಉತ್ತರ ನೀಡುತ್ತಿದ್ದಾರೆ. ಆದ್ದರಿಂದ ಕಳಪೆ ಬಿತ್ತನೆ ಬೀಜ ಮಾರಾಟ ಮಾಡಿ ಮೋಸ ಮಾಡಿರುವ ಸಿದ್ದಮಲ್ಲೇಶ್ವರ ಟ್ರೇಡರ್ಸ್ ಹಾಗೂ ಸರಬರಾಜು ಮಾಡಿರುವ ಕಂಪನಿ ವಿರುದ್ಧ ಸಂಬಂಧಪಟ್ಟ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ವಹಿಸಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ರೈತ ಕುಮಾರ್ ಒತ್ತಾಯಿಸಿದ್ದಾರೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago