News Karnataka Kannada
Wednesday, May 08 2024
ಚಾಮರಾಜನಗರ

ಮನೆಯೊಳಗೆ ಗುಂಡಿ ಅಗೆದು ನಿಧಿ ಶೋಧನೆ: ಆರೋಪಿಗಳು ಪರಾರಿ

Digging a pit inside the house, searching for treasure, accused flee
Photo Credit : News Kannada

ಚಾಮರಾಜನಗರ: ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ವಿ.ಎಸ್. ದೊಡ್ಡಿ ಗ್ರಾಮದ ಮನೆಯೊಂದರಲ್ಲಿ ನಿಧಿ ಆಸೆಗೋಸ್ಕರ ಗುಂಡಿ ತೆಗೆಯುತ್ತಿದ್ದ ಪ್ರಕರಣ ಭಾನುವಾರ ರಾತ್ರಿ ಬೆಳಕಿಗೆ ಬಂದಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

ಘಟನೆ ವಿವರ: ವಿ.ಎಸ್. ದೊಡ್ಡಿ ಗ್ರಾಮದ ಭಾಗ್ಯಾ ಎಂಬುವರು ನಾಲೈದು ವರ್ಷದ ಹಿಂದೆ ವಾಸ್ತು ಸರಿಯಿಲ್ಲ ವೆಂದು ಮನೆಯನ್ನು ತೊರೆದು ಬೆಂಗಳೂರಿನಲ್ಲಿ ನೆಲೆಸಿದ್ದರು. ಈ ವೇಳೆ ಸಂಬಂಧಿಕ ಪರಶಿವ ಎಂಬುವರು ಭಾಗ್ಯಾ ಅವರನ್ನು ಸ್ಥಳೀಯ ಜೋತಿಷಿಯೊಬ್ಬರ ಬಳಿ ಕರೆದು ಕೊಂಡು ಹೋಗಿ ಶಾಸ್ತ್ರ ಕೇಳಿಸಿದ್ದರು.

ಮನೆಯಲ್ಲಿ ನಿಧಿ ಇದೆ ಎಂದು ಜೋತಿಷಿ ತಿಳಿಸಿದಾಗ, ಭಾಗ್ಯಾ ಅವರು ನಿಧಿ ಶೋಧನೆಗಾಗಿ ಅನುಮತಿ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜೋತಿಷಿ ತನ್ನ ಜತೆಗಾರನೊಂದಿಗೆ ಕಳೆದ ವಾರ ವಿ.ಎಸ್. ದೊಡ್ಡಿಗೆ ಆಗಮಿಸಿ ಭಾಗ್ಯಾ ಅವರ ಸಮ್ಮುಖದಲ್ಲೇ ರಾತ್ರಿ ವೇಳೆ ಮನೆಯಲ್ಲಿ ಕಳಸವಿಟ್ಟು ವಿಶೇಷ ಪೂಜೆ ನೆರವೇರಿಸಿದ. ಯಾರಿಗೂ ತಿಳಿಯದಂತೆ ನಿಧಿಗಾಗಿ ಗುಂಡಿ ತೆಗೆಯುವ ಕಾರ್ಯ ಆರಂಭಿಸಿದ್ದ. 3 ಅಡಿ ಅಗಲ ಹಾಗೂ 20 ಅಡಿ ಆಳದ ಗುಂಡಿ ತೆಗೆಸಿದ್ದ.

ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆಗೆ ಆಗಮಿಸಿದ ವೇಳೆ ಜ್ಯೋತಿಷಿ ಹಾಗೂ ಜತೆಗಿದ್ದವನು ಪರಾರಿಯಾಗಿದ್ದಾರೆ. ನಿಧಿಗಾಗಿ ಇಂತಹ ಕಾರ್ಯ ನಡೆಸಬಾರದೆಂದು ಒಡೆಯರಪಾಳ್ಯ ಉಪ ಠಾಣೆ ಪೊಲೀಸರು ಭಾಗ್ಯಾ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು