ಗುಂಡ್ಲುಪೇಟೆ: ಕಾಡಿನರಾಜ ಎಂದೇ ಕರೆಯಿಸಿಕೊಳ್ಳುವ ಹುಲಿಯನ್ನು ಆನೆಯೊಂದು ಅಟ್ಟಾಡಿಸಿ ಓಡಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದಲ್ಲಿ ನಡೆದಿದ್ದು ಸಫಾರಿಗರು ದೃಶ್ಯ ಕಂಡು ರೋಮಾಂಚಿತರಾಗಿದ್ದಾರೆ.
ಸಂಜೆ ಸಫಾರಿಯಲ್ಲಿ ಈ ಘಟನೆ ನಡೆದಿದೆ. ಆನೆಯೊಂದು ತನ್ನ ಮರಿ ಜೊತೆ ತೆರಳುತ್ತಿದ್ದಾಗ ಎದುರು ಬಂದ ಹುಲಿರಾಯ ಮರಿ ಮೇಲೆ ಹೊಂಚು ಹಾಕಿದೆ. ಕೂಡಲೇ ಎಚ್ಚೆತ್ತ ಆನೆ ಹುಲಿಯನ್ನು ಅಟ್ಟಾಡಿಸಿ ಪೇರಿ ಕೀಳುವಂತೆ ಮಾಡಿದೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಸಾಕಷ್ಟು ವೈರಲ್ಲಾಗಿದೆ.