ಚಾಮರಾಜನಗರ: ಮನೆಯ ಬಳಿ ಆನೆಗಳು ಬರುತ್ತವೆ ನಮ್ಮನ್ನ ಗ್ರಾಮದಿಂದ ಸ್ಥಳಾಂತರಗೊಳಿಸಿ ಎಂದು ಚಂಗಡಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಬಳಿ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ದಟ್ಟ ಕಾನನದ ನಡುವೆ ಇರುವ ಚಂಗಡಿ ಗ್ರಾಮದಲ್ಲಿನ ಗ್ರಾಮಸ್ಥರದ್ದು ನಿತ್ಯ ನರಕಯಾತನೆಯ ಬದುಕಾಗಿದ್ದು ಮಲೆ ಮಹದೇಶ್ವರಬೆಟ್ಟದ ದಟ್ಟಾರಣ್ಯದ ನಡುವೆ ಇರುವುದರಿಂದ ಇಲ್ಲಿ ಕಾಡು ಪ್ರಾಣಿಗಳ ಹಾವಳಿ ನಿತ್ಯ ನಿರಂತರ. ಕಾಡು ಪ್ರಾಣಿಗಳ ದಾಳಿಯಿಂದ ನಮ್ಮ ಗ್ರಾಮಸ್ಥರು ಮೃತಪಟ್ಟ ನಿದರ್ಶನವೂ ಇದೆ.
ಮನೆಯ ಬಳಿಯೇ ಕಾಡಾನೆಗಳು ಬಂದು ತೊಂದರೆ ಕೊಡುವುದರ ಜೊತೆಗೆ ಜಮೀನುಗಳ ಬಳಿ ಯಾವುದೇ ಫಸಲು ಬೆಳೆಯಲು ಆಗದ ಸ್ಥಿತಿ ಇದೆ ಎಂದು ಇಲ್ಲಿಯ ಮಹಿಳೆಯರು ಹಾಗೂ ರೈತರು ತಮ್ಮ ಆಳಲನ್ನು ತೋಡಿಕೊಂಡರು.
ಮೂಲ ಸೌಲಭ್ಯ ಕೊರತೆ, ಕಾಡು ಪ್ರಾಣಿಗಳ ನಿರಂತರ ಹಾವಳಿ, ದಾಳಿ ಸೇರಿದಂತೆ ನಾನಾ ಸಮಸ್ಯೆಗಳಿಂದ ಬೇಸತ್ತಿದ್ದೇವೆ ಬೇಗ ಸ್ಥಳಾಂತರಗೊಳಿಸಿ ಎಂದು ರೈತ ಸಂಘದ ಅಧ್ಯಕ್ಷ ಚಂಗಡಿ ಕರೆಯಪ್ಪ ಒತ್ತಾಯಿಸಿದ್ದಾರೆ.
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…
ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…
ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…