News Karnataka Kannada
Saturday, May 18 2024
ಚಾಮರಾಜನಗರ

ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ನಾಡಿಗೆ ಕರೆತಂದ ಜಿಲ್ಲಾಡಳಿತ

ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ  ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ‌ಚಾಮರಾಜನಗರ ಜಿಲ್ಲಾಡಳಿತ ನಾಡಿಗೆ ಕರೆತಂದಿದೆ.
Photo Credit : NewsKarnataka

ಚಾಮರಾಜನಗರ: ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ  ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ‌ಚಾಮರಾಜನಗರ ಜಿಲ್ಲಾಡಳಿತ ನಾಡಿಗೆ ಕರೆತಂದಿದೆ.

ಬಂಧನದ ಭಯದಿಂದ ಗ್ರಾಮಸ್ಥರು ಊರು ಖಾಲಿ ಮಾಡಿದ್ದರು. ಹೀಗಾಗಿ ಗ್ರಾಮದಲ್ಲಿ ವೃದ್ದರು, ಚಿಕ್ಕ ಮಕ್ಕಳು ಜಾನುವಾರುಗಳಿಗೆ ಆರೈಕೆ ಇಲ್ಲದೆ ಪರದಾಡಿದ್ದು, ಮೇವು ನೀರು‌ ಕೊಡುವವರು ಇಲ್ಲದೆ ಎರಡು ಎಮ್ಮೆಗಳು ಸಾವನ್ನಪ್ಪಿದ್ದವು. ಹೀಗಾಗಿ ಇದನ್ನು ಮನಗಂಡು ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ‌ಪತ್ತೆ ಹಚ್ಚಿ ಊರಿಗೆ ಕರೆತರಲಾಗಿದೆ.

ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗುವುದು. ಉಳಿದವರು ಹೆದರುವ ಅವಶ್ಯಕತೆ ಇಲ್ಲ. ನಿರ್ಭೀತಿಯಿಂದ ಇರಬಹುದು ಎಂದು ಗ್ರಾಮಸ್ಥರಿಗೆ ಉಪವಿಭಾಗಾಧಿಕಾರಿ ಶಿವಮೂರ್ತಿ, ಡಿವೈಎಸ್ಪಿ ಧರ್ಮೇಂದ್ರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಭಯ ಧೈರ್ಯ ತುಂಬಿದಿದ್ದಾರೆ.

ಗಲಭೆ ಪ್ರಕರಣದ ಹಿನ್ನಲೆ 33 ಮಂದಿ ಪೊಲೀಸರ ಅಥಿತಿಯಾದ್ರೆ 250 ಕ್ಕೂ ಹೆಚ್ಚು ಮಂದಿಯ ಮೇಲೆ ಎಫ್​ಐ ಆರ್​ ದಾಖಲಾಗಿದೆ. ಇತ್ತ ಎಫ್​ಐಆರ್ ದಾಖಲಾಗುತ್ತಿದ್ದಂತೆ ಗ್ರಾಮದಲ್ಲಿದ್ದವರು ಪರಾರಿಯಾಗಿದ್ದು ಕೇವಲ ಮಂದಾರೆ ಹಾಡಿಯ 71 ಮಂದಿಯಷ್ಟೇ ಮತದಾನ ಮಾಡಿದ್ದರು. ಮತಗಟ್ಟೆ 146 ರಲ್ಲಿ ಒಟ್ಟು 528 ಮತದಾರರಿದ್ದು ಈ ಪೈಕಿ 71 ಮಂದಿ ಮಾತ್ರ ಮತದಾನ ಮಾಡಿದ್ದರು.

ಸೂಕ್ತ ಮೂಲಭೂತ ಸೌಕರ್ಯ ನೀಡುವಂತೆ ಪ್ರತಿಭಟನೆ ನಡೆಸಿ ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸಿ ಮತದಾನಕ್ಕೆ ಕರೆ ತಂದ ವೇಳೆ ಭಾರಿ ಗಲಭೆ ಸೃಷ್ಠಿಯಾಗಿತ್ತು. ಇಂಡಿಗನತ್ತ ಮತಗಟ್ಟೆ 146 ರ ಒಳ ನುಗ್ಗಿದ ಪ್ರತಿಭಟನಾಕಾರರು ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಮತಗಟ್ಟೆ ಹಾಗೂ ಇವಿಎಂ ಮಷಿನ್ ಧ್ವಂಸ ಗೊಳಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು