News Karnataka Kannada
Tuesday, April 30 2024
ಚಾಮರಾಜನಗರ

ಆನೆ ಹಾವಳಿ ನಿಯಂತ್ರಿಸದಿದ್ದರೆ ವಿಷ ಕುಡಿಯುವುದಾಗಿ ಅರಣ್ಯ ಇಲಾಖೆಗೆ ರೈತರ ಎಚ್ಚರಿಕೆ

ಸದಾ ಗಜಕಾಟದಿಂದ ಬೇಸತ್ತಿರುವ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಮಂಚಹಳ್ಳಿ ಗ್ರಾಮದ ರೈತರು ಆನೆ ಹಾವಳಿ ನಿಯಂತ್ರಣ ಮಾಡಲು ಆಗದಿದ್ದರೆ ವಿಷ ಕುಡಿದು ಸಾಯಬೇಕಾಗುತ್ತದೆ ಇದಕ್ಕೆ ಅರಣ್ಯ ಇಲಾಖೆಯೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
Photo Credit : NewsKarnataka

ಚಾಮರಾಜನಗರ:  ಸದಾ ಗಜಕಾಟದಿಂದ ಬೇಸತ್ತಿರುವ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಮಂಚಹಳ್ಳಿ ಗ್ರಾಮದ ರೈತರು ಆನೆ ಹಾವಳಿ ನಿಯಂತ್ರಣ ಮಾಡಲು ಆಗದಿದ್ದರೆ ವಿಷ ಕುಡಿದು ಸಾಯಬೇಕಾಗುತ್ತದೆ ಇದಕ್ಕೆ ಅರಣ್ಯ ಇಲಾಖೆಯೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಓಂಕಾರ್ ವನ್ಯಜೀವಿ ವಲಯದ ಮಂಚಹಳ್ಳಿ ಗ್ರಾಮದ ರೈತರು ಆನೆದಾಳಿಯಿಂದ ತತ್ತರಿಸಿಹೋಗಿದ್ದು ಬಾರಿ ನಷ್ಟಕ್ಕೆ ಸಿಲುಕಿದ್ದಾರೆ. ಪ್ರತಿ ನಿತ್ಯ ರೈತರ ಜಮೀನಿಗೆ ಲಗ್ಗೆಯಿಡುವ ಕಾಡಾನೆಗಳು ಪಸಲನ್ನ ನಾಶಪಡಿಸುವುದಲ್ಲದೆ ಸೋಲಾರ್ ತಂತಿ ಬೇಲಿಯನ್ನು ಸಂಪೂರ್ಣವಾಗಿ ಜಖಂಗೊಳಿಸಿವೆ ಇದರಿಂದ ರೈತರಿಗೆ ಬೆಳೆ ನಷ್ಟದ ಜೊತೆ ಸೋಲಾರ್ ತಂತಿ ಬೇಲಿ ನಾಶದಿಂದ ಲಕ್ಷಾಂತರ ರೂ ನಷ್ಟವಾಗಿದೆ. ಸತತ ಕಾಡಾನೆಗಳ ದಾಳಿಯಿಂದ ರೈತರು ಮಾನಸಿಕವಾಗಿ ಕುಗ್ಗಿಹೋಗಿದ್ದು ಫಸಲು ಮಾಡಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ರಾತ್ರಿ ಗಸ್ತು ಹೆಚ್ಚಿಸುವ ಜೊತೆ ರೈಲ್ವೆ ಕಂಬಿ ಅಳವಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು