News Karnataka Kannada
Sunday, May 12 2024
ಚಾಮರಾಜನಗರ

ಬಂಡೀಪುರದಲ್ಲಿ ಪ್ರವಾಸಿಗರ ನಡುವೆ ಡಿಶುಂ-ಡಿಶುಂ: ಟ್ವೀಟ್ ನಿಂದ ದಾಖಲಾಯ್ತು ಎಫ್ಐಆರ್!!

fight among tourists in Bandipur: FIR lodged over tweet
Photo Credit : Twitter

ಗುಂಡ್ಲುಪೇಟೆ: ಪ್ರವಾಸಿಗರ ನಡುವೆ ಜಟಾಪಟಿ ನಡೆದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾದ್ದರಿಂದ ಪೊಲೀಸರು ಎಫ್ಐಆರ್ ದಾಖಲಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ.

ಕೇರಳ ಮೂಲದ ಅರ್ಜುನ್ ಎಂಬವರಿಗೆ ಬೆಂಗಳೂರು ಮೂಲದ ನಾಲ್ವರು ಯುವಕರು ಅಡ್ಡಹಾಕಿ ಜಟಾಪಟಿ‌ ನಡೆಸಿದ್ದರ ವೀಡಿಯೋವನ್ನು ಥರ್ಡ್ ಐ ಎಂಬ ಖಾತೆದಾರ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದರು.

ಟ್ವೀಟ್ ಗಮನಿಸಿದ ಎಡಿಜಿಪಿ ಅಲೋಕ್ ಕುಮಾರ್ ಚಾಮರಾಜನಗರ ಪೊಲೀಸ್ ಸಿಬ್ಬಂದಿ ಜೊತೆಗೆ ಮಾತನಾಡಿ ಕ್ರಮಕ್ಕೆ ಸೂಚಿಸಿದ್ದರು. ಅದರಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ನಾಲ್ವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.‌

ಟ್ವಿಟರ್ ನಲ್ಲಿ ಥರ್ಡ್ ಐ ಖಾತೆದಾರ ವೀಡಿಯೋ ಹಂಚಿಕೊಂಡಿರುವುದಕ್ಕೆ ನೆಟ್ಟಿಗರು ಮಿಶ್ರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಯಾವ ಪ್ರವಾಸಿಗರೂ ಸುಖಾಸುಮ್ಮನೆ ಕಾರು ಅಡ್ಡಹಾಕಿ ಬೈಯ್ಯುವುದಿಲ್ಲ, ಕೇರಳ ಮೂಲದ ವ್ಯಕ್ತಿ ಏನೋ ಕಿರಿಕ್ ಮಾಡಿದ್ದರಿಂದ ಕುಪಿತಗೊಂಡು ಹೊಡೆದಿದ್ದಾರೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದು ಒಂದು ದೃಷ್ಟಿಕೋನದಿಂದ ತನಿಖೆ ನಡೆಸದೇ ಯುವಕರು ಯಾಕೆ ಆ ರೀತಿ ಮಾಡಿದರು ಎಂಬುದನ್ನೂ ತನಿಖೆ ನಡೆಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಕಳೆದ ಜೂ.17 ರಂದು ಬೆಂಗಳೂರಿನಿಂದ ಕೇರಳಕ್ಕೆ ತೆರಳುವಾಗ ಯುವಕರ ಜೀಪಿಗೆ ಓವರ್ ಟೇಕ್ ಮಾಡಲು ಸ್ಥಳವಕಾಶ ಸಿಗದ ಹಿನ್ನೆಲೆಯಲ್ಲಿ ಏಕಾಏಕಿ ನನ್ನ ಕಾರಿಗೆ ಅಡ್ಡಹಾಕಿ ಹೊಡೆದಿದ್ದಾರೆ, ಡ್ಯಾಶ್ ಬೋರ್ಡ್ ಕ್ಯಾಮರಾ ಒಡೆದು ಹಾಕಲು ಯತ್ನಿಸಿದ್ದಾರೆ, ಕೆಲಸದ ಒತ್ತಡ ಇದ್ದಿದ್ದರಿಂದ ತಡವಾಗಿ ದೂರು ಕೊಡುತ್ತಿರುವುದಾಗಿ ಅರ್ಜುನ್ ಹೇಳಿದ್ದಾರೆ.

ಇನ್ನು, ಜಟಾಪಟಿ ವೀಡಿಯೋವನ್ನು ಮಾಜಿ ಸಚಿವ ಸುರೇಶ್ ಕುಮಾರ್ ಹಂಚಿಕೊಂಡಿದ್ದು ಈ ರೀತಿ ಘಟನೆಗಳಿಂದ ಪ್ರಾಣಿಗಳಿಗೂ ತೊಂದರೆ ಆಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು