ಚಾಮರಾಜನಗರ: ಕರ್ನಾಟಕ ತಮಿಳುನಾಡಿನ ಗಡಿ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ಸಮೀಪದ ತಲೆಮಲೈ ಕಾಡಿನಲ್ಲಿ ಹಾಡು ಹಗಲೇ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದಲ್ಲಿ ಮರ ಗಿಡಗಳು ಭಸ್ಮವಾಗಿರುವ ಬಗ್ಗೆ ವರದಿಯಾಗಿದೆ.
ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ಸಮೀಪದ ತಲೆ ಮಲೈ ಅರಣ್ಯವು ಸತ್ಯಮಂಗಲ ಹುಲಿ ಸಂರಕ್ಷಿತ ಪ್ರದೇಶಕ್ಕೆ ಒಳಪಟ್ಟಿದ್ದು, ಈ ಭಾಗದಲ್ಲಿ ಬೆಜ್ಜಲಟ್ಟಿ ಬಳಿ ಬೆಂಕಿ ಕಾಣಿಸಿಕೊಂಡಿದ್ದನ್ನ ವಾಹನ ಸವಾರರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ತಮಿಳುನಾಡಿನ ತಾಳವಾಡಿ ಭಾಗದ ಅರಣ್ಯಾಧಿಕಾರಿಗಳು ಮತ್ತು ಅಗ್ನಿ ಶಾಮಕದಳದವರು ಬೆಂಕಿ ನಿಯಂತ್ರಿಸಬೇಕೆಂದು ಒತ್ತಾಯಿಸಿದ್ದಾರೆ.