ಚಾಮರಾಜನಗರ: ಬಿ ಆರ್ ಟಿ ಹುಲಿ ಸಂರಕ್ಷಿತಾ ಪ್ರದೇಶದ ಸುಮಾರು 30 ಎಕರೆಗೂ ಹೆಚ್ಚು ಕಾಡು ಬೆಂಕಿಗೆ ಆಹುತಿಯಾಗಿರುವ ಘಟನೆ ಕುರಿತಂತೆ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಕಾಂಟ್ರಾಕ್ಟರ್ ಸ್ಪಷ್ಟನೆ ನೀಡಿದ್ದಾರೆ.
ಬಿಸಿಲಿನ ತಾಪಮಾನಕ್ಕೆ ಕಾಡ್ಗಿಚ್ಚು ಕಾಣಿಸಿಕೊಂಡು 50 ರಿಂದ 60 ಎಕರೆಯಷ್ಟು ಕಾಡಿನ ನೆಲ ಹಾಸು ಬೆಂಕಿಗಾಹತಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಪುಣಜನೂರು ವಲಯದ ಕೊಡಾರೆ ಪ್ರದೇಶದಲ್ಲಿ ಸಂಭವಿಸಿತ್ತು.
ಚಾಮರಾಜನಗರ ತಾಲ್ಲೂಕಿನ ಪುಣಜನೂರು ಬಳಿಯ ಕೊಡಾರೆ ಪ್ರದೇಶದ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಸೋಮವಾರ ಮದ್ಯಾಹ್ನ ಕಾಣಿಸಿಕೊಂಡ ಬೆಂಕಿಯನ್ನ ನಂದಿಸಲು ಸಂಜೆಯ ತನಕ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿ , ರಾತ್ರಿಯ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ ಎಂದು ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಕಂಟ್ರಾಕ್ಟರ್ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.