ಚಾಮರಾಜನಗರ: ಈಚರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗ್ತಿದ್ದ 1 ಕೋಟಿ ಹತ್ತು ಲಕ್ಷ ಮೌಲ್ಯ ಬೆಲೆಬಾಳುವ ಬಾರಿ ಪ್ರಮಾಣದ ಗಾಂಜಾವನ್ನ ಜಪ್ತಿ ಮಾಡಿರುವ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪೊಲೀಸರು ನಾಲ್ವರು ಆಸಾಮಿಗಳನ್ನ ಬಂಧಿಸಿದ್ದಾರೆ.
ಬೆಂಗಳೂರು ಕಡೆಯಿಂದ ಈಚರ್ ವಾಹನದಲ್ಲಿ ಸಾಗಿಸುತ್ತಿದ್ದ 221 ಕೆಜಿಯಷ್ಟು ಒಣ ಗಾಂಜಾವನ್ನ ಕೊಳ್ಳೇಗಾಲ ಪೊಲೀಸರು ನರಿಪುರ ಗ್ರಾಮದಲ್ಲಿ ಸೆರೆಹಿಡಿದಿದ್ದಾರೆ. ಚಾಮರಾಜನಗರ ಎಸ್ಪಿ ಮತ್ತು ಎಎಸ್ಪಿ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಡಿವೈಎಸ್ಪಿ ಧರ್ಮೇಂದ್ರ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ತಾಲೂಕಿನ ನರಿಪುರ ಗ್ರಾಮದ ಮಧುವನಹಳ್ಳಿ ಬೈಪಾಸ್ ರಸ್ತೆಯಲ್ಲಿ ದಾಳಿ ನಡೆಸುವ ಮೂಲಕ ನಾಲ್ವರು ಅಸಾಮಿಗಳನ್ನ ಬಂಧಿಸಿದ್ದಾರೆ.
ಕೆ.ಎ.13 ಡಿ – 2235 ನೋಂದಣಿ ಈಚರ್ ವಾಹನದಲ್ಲಿ ನಾಲ್ಕು ಬಿಳಿ ಬಣ್ಣದ ಪ್ಲಾಸ್ಟಿಕ್ ಚೀಲಗಳಲ್ಲಿ 221 ಕೆಜಿ ಒಣ ಗಾಂಜಾವನ್ನ ಪ್ಲೇವುಡ್ ಶೀಟ್ ಗಳ ಜೊತೆ ಬಚ್ಚಿಟ್ಟು ಸಾಗಾಟ ಮಾಡಲಾಗುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಸುಮಾರು ಒಂದು ಕೋಟಿ ಹತ್ತು ಲಕ್ಷ ಮೌಲ್ಯದ 221 ಕೆಜಿ ಒಣ ಗಾಂಜಾವನ್ನ ವಶಕ್ಕೆ ಪಡೆದು , ಬೆಂಗಳೂರು, ಹರಿಯಾಣ, ಯಾದಗಿರಿ, ಹರಿಹರ ಮೂಲದ ಸೇಂದಿಲ್ ಕುಮಾರ್, ರವಿಕುಮಾರ್, ಉಮಾಶಂಕರ್, ವಿನಾಯಕ ಎಂಬ ನಾಲ್ವರನ್ನು ವಶಕ್ಕೆ ಪಡೆಯಲಾಗಿದ್ದು ಎನ್ ಡಿಪಿಎಸ್ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…