ಗುಂಡ್ಲುಪೇಟೆ: ಜನತೆಯ ಸೇವೆ ಮಾಡಲು ನನಗೊಂದು ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಮನವಿ ಮಾಡಿದರು. ಗುಂಡ್ಲುಪೇಟೆ ಪಟ್ಟಣದ ಅಂಭೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ದೇಶದ ಭದ್ರತೆಗಾಗಿ ನರೇಂದ್ರ ಮೋದಿಯವರನ್ನು ಮೂರನೇ ಭಾರಿಗೆ ಪ್ರಧಾನಮಂತ್ರಿಗಳನ್ನಾಗಿ ಆಯ್ಕೆ ಮಾಡಬೇಕು ಎಂದು ದೇಶದ ಜನತೆ ಈಗಾಗಲೇ ಸಂಕಲ್ಪ ಮಾಡಿದ್ದಾರೆ. ಮೋದಿಯವರ ಕೈ ಬಲಪಡಿಸಲು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದ ಜನತೆ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ವಿನಂತಿಸಿದರು.
ದೇಶವನ್ನ ಮುನ್ನಡೆಸುವ ಜವಾಬ್ದಾರಿಯನ್ನ ಹೊತ್ತು ಕಳೆದ 10 ವರ್ಷಗಳಲ್ಲಿ ಸಮಗ್ರ ಚಿತ್ರಣವನ್ನೇ ಬದಲಾಯಿಸಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುವ ಹಾಗೆ ಮಾಡಿದ್ದು ನರೇಂದ್ರ ಮೋದಿಯವರು , ದೇಶದ ಭದ್ರತೆ ಮತ್ತು ಜನತೆ ಕಲ್ಯಾಣಕ್ಕಾಗಿ ನರೇಂದ್ರ ಮೋದಿಯವರ ಅನಿವಾರ್ಯಾತೆ ಬಹಳಷ್ಟಿದೆ ಈ ಹಿನ್ನೆಲೆಯಲ್ಲಿ ಅತ್ಯಧಿಕ ಬಹುಮತದೊಂದಿಗೆ ಆಯ್ಕೆ ಮಾಡಬೇಕಿದೆ ಮೋದಿಯವರ ಗೆಲುವು ದೇಶದ ಗೆಲುವಾಗಲಿದೆ ಎಂದರು.
ನನ್ನ 32 ವರ್ಷಗಳ ರಾಜಕೀಯ ಜೀವನದಲ್ಲಿ ಒಂದು ಬಾರಿ ಕೊಳ್ಳೆಗಾಲ ಕ್ಷೇತ್ರದ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ಈ ಬಾರಿ ಲೋಕಸಭಾ ಕ್ಷೇತ್ರದಲ್ಲಿ ಮತದಾರರು ಬೆಂಬಲ ನೀಡಿ ಆರಿಸಿ ಕಳುಹಿಸಿದರೆ, ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಶಾಸಕರ ಕೊರತೆಯನ್ನು ನೀಗಿಸುವಂತೆ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.
ಎಸ್.ಬಾಲರಾಜು ಅವರನ್ನ ಅತ್ಯಧಿಕ ಮತಗಳ ಅಂತರದಿಂದ ಜಯಶೀಲರನ್ನಾಗಿ ಮಾಡುವ ಮೂಲಕ ಲೋಕಸಭೆಗೆ ಕಳುಹಿಸಲು ದೃಢ ಸಂಕಲ್ಪ ಮಾಡೋಣ , ನರೇಂದ್ರ ಮೋದಿಯವರ ಕೈ ಬಲಪಡಿಸೋಣ ಎಂದು ಕೊಳ್ಳೇಗಾಲ ಮಾಜಿ ಶಾಸಕ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್ ಮತ್ತು ಚಾಮರಾಜನಗರ ಜಿಲ್ಲಾಧ್ಯಕ್ಷ ಗುಂಡ್ಲುಪೇಟೆ ಮಾಜಿ ಶಾಸಕ ನಿರಂಜನ್ ಕುಮಾರ್ ಕಾರ್ಯಕರ್ತರಿಗೆ ಹುರಿದುಂಬಿಸಿದರು.