News Karnataka Kannada
Friday, May 10 2024
ಚಾಮರಾಜನಗರ

ಬಿಳಿಗಿರಿರಂಗನ ಬೆಟ್ಟದಲ್ಲಿ ಉತ್ಸವ ಮೂರ್ತಿಗೆ ಚಿನ್ನಾಭರಣಗಳ ಮೆರವಣಿಗೆ

New Project 2024 01 15t120507.772
Photo Credit : News Kannada

ಚಾಮರಾಜನಗರ: ಮಕರ ಸಂಕ್ರಾಂತಿಯ ಮರುದಿನ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆಯಲಿರುವ ಚಿಕ್ಕ ಜಾತ್ರೆ ರಥೋತ್ಸವಕ್ಕೆ ಉತ್ಸವ ಮೂರ್ತಿಗೆ ಚಿನ್ನಾಭರಣಗಳನ್ನು ಖಜಾನೆಯಿಂದ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದಲ್ಲಿರುವ ತಾಲ್ಲೂಕು ಕಛೇರಿಯಲ್ಲಿನ ಖಜಾನೆ ಯಲ್ಲಿ ಇರಿಸಲಾಗಿದ್ದ ಬಿಳಿಗಿರಿರಂಗನಾಥ ಸ್ವಾಮಿಯ ಉತ್ಸವ ಮೂರ್ತಿ ಹಾಗೂ ಗರ್ಭಗುಡಿ ಮೂರ್ತಿಯ ಆಭರಣಗಳನ್ನು ತಹಸೀಲ್ದಾರ್ ಜಯಪ್ರಕಾಶ್ ಸಮ್ಮುಖದಲ್ಲಿ ದೇವಾಲಯ ಅರ್ಚಕ ಸಿಬ್ಬಂದಿಗಳಿಗೆ ಹಸ್ತಾಂತರ ಮಾಡಲಾಯಿತು.

ನಾಳೆ ( ಮಂಗಳವಾರ) ಬಿಳಿಗಿರಿರಂಗನ ಬೆಟ್ಟ ದಲ್ಲಿ ಚಿಕ್ಕ ಜಾತ್ರೆ ಹಾಗೂ ರಥೋತ್ಸವ ನಡೆಯಲಿದ್ದು, ರಾಜ್ಯದ ವಿವಿದೆಡೆಗಳಿಂದ ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಾಳೆ ಬಿಳಿಗಿರಿರಂಗನ ಬೆಟ್ಟಕ್ಕೆ ದ್ಚಿಚಕ್ರವಾಹನ ಸಂಚಾರ ನಿಷೇಧಿಸಿ ಆದೇಶಹೊರಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು