News Karnataka Kannada
Sunday, April 28 2024
ಚಾಮರಾಜನಗರ

ಗುಂಡ್ಲುಪೇಟೆ: ಕಸದ ತೊಟ್ಟಿಯಾದ ಚಾಮರಾಜನಗರ ಬೈಪಾಸ್ ರಸ್ತೆ

Cham
Photo Credit : By Author

ಚಾಮರಾಜನಗರ: ನಗರದ ಸಮೀಪದ ಸೋಮವಾರಪೇಟೆಯಿಂದ ಗುಂಡ್ಲುಪೇಟೆ ರಸ್ತೆಗೆ ಸಾಗುವ ಬೈಪಾಸ್ ರಸ್ತೆಯಲ್ಲಿ ಕಸ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಗಬ್ಬು ನಾರುತ್ತಿದ್ದು, ಜನ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸತ್ತ ಪ್ರಾಣಿಗಳನ್ನು ಕೂಡ ಇಲ್ಲಿಯೇ ಎಸೆದು ಹೋಗುತ್ತಿದ್ದು, ಬೈಪಾಸ್ ರಸ್ತೆಯೋ ಕಸದ ತೊಟ್ಟಿಯೋ ಎಂಬ ಸಂಶಯ ಮೂಡಿದೆ. ಈ ವ್ಯಾಪ್ತಿಯಲ್ಲಿ ವಾಸಿಸುವವರ ಪರಿಸ್ಥಿತಿ ಶೋಚನೀಯವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಇರುವುದು ವಾಹನಗಳು ಸಂಚಾರ ಮಾಡುವುದಕ್ಕೆ ಹೊರತು ಸತ್ತ ಪ್ರಾಣಿಗಳು ಮತ್ತು ಕೋಳಿ ತ್ಯಾಜ್ಯ, ಬಾಳೆಸೋಗೆ ಹಾಗೂ ಇನ್ನು ಬಳಕೆಯಾಗದ ವಸ್ತುಗಳನ್ನು ತಂದು ಸುರಿದು ಹೋಗಲು ಅಲ್ಲ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ನಗರದಿಂದ ಸುಮಾರು 4 ಕಿಲೋ ಮೀಟರ್ ದೂರದ ಕರಿವರದಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಗರ ಸಭೆ ವತಿಯಿಂದ ನಗರ ಸಾರ್ವಜನಿಕರು ಬಳಸಿದ ತ್ಯಾಜ್ಯ ವಸ್ತುಗಳು, ಮನೆ ಮನೆಗಳಲ್ಲಿ ಹಾಗೂ ಹೋಟೆಲ್‌ಗಳ ಕಸವನ್ನು ಸಂಗ್ರಹಿಸಲು ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. ಆದರೂ ಬೈಪಾಸ್ ರಸ್ತೆಯಲ್ಲಿ ಕಸಗಳನ್ನು ಹಾಕಿ ಚಲುವ ಚಾಮರಾಜನಗರದ ಅಂದವನ್ನು ಹಾಳುಮಾಡುತ್ತಿದ್ದಾರೆ. ಇದರ ಬಗ್ಗೆ ಕ್ರಮ ವಹಿಸಬೇಕು ಎಂದು ಸೋಮವಾರ ಪೇಟೆಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಗರಸಭೆಯವರು ಇತ್ತ ಗಮನ ಹರಿಸಬೇಕಿದೆ. ಗ್ರಾಮಸ್ಥರ ಆರೋಗ್ಯ ಕೆಟ್ಟರೆ ಸಂಬಂಧಿಸಿದ ಅಧಿಕಾರಿಗಳು ಹೊಣೆಯಾಗಬೇಕಾಗುತ್ತದೆ.

ಜಿಲ್ಲಾಧಿಕಾರಿಗಳು ಕೂಡಲೇ ಹದಗೆಟ್ಟ ಬೈಪಾಸ್ ರಸ್ತೆಯನ್ನು ದುರಸ್ತಿ ಮಾಡಿ ಕಸ ಎಸೆಯುವುದಕ್ಕೆ ಬ್ರೇಕ್ ಹಾಕುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು