ಹನೂರು: ಅಕ್ರಮವಾಗಿ ದಾಸ್ತಾನು ಮಾಡಿದ್ದ ಕಳ್ಳಭಟ್ಟಿ ಸಾರಾಯಿ ಹಾಗೂ ಬೆಲ್ಲದ ಕೊಳೆಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಮಾರಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅರ್ಧ ಲೀ ಕಳ್ಳ ಭಟ್ಟಿ ಸಾರಾಯಿ ಹಾಗೂ 10 ಲೀ ಬೆಲ್ಲದ ಕೊಳೆಮತ್ತು 8.640 ಲೀ ಮದ್ಯವನ್ನು ವಶ ಪಡಿಸಿಕೊಂಡಿದ್ದು ಆರೋಪಿ ಪರಾರಿಯಾಗಿದ್ದು ಪತ್ತೆಗಾಗಿ ಬಲೆ ಬೀಸಿದ್ದಾರೆ.
ಮಾರಳ್ಳಿ ಗ್ರಾಮದ ರವಿ ನಾಯ್ಕ ಮನೆಯಲ್ಲಿ ಅಕ್ರಮವಾಗಿ ಕಳ್ಳ ಭಟ್ಟಿ ಸಾರಾಯಿ ದಾಸ್ತಾನು ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೇಲೆ ಕೊಳ್ಳೇಗಾಲ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ಉಪ ನಿರೀಕ್ಷಕ ಸಿದ್ದಯ್ಯ ಅವರ ತಂಡ ರವಿ ನಾಯ್ಕ ಬಿನ್ ಲೇಟ್ ಕೃಷ್ಣ ನಾಯ್ಕ ಎಂಬುವವರ ಮನೆಯ ಮೇಲೆ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ದ್ರವ್ಯಗಳನ್ನು ವಶ ಪಡಿಸಿಕೊಂಡಿದ್ದು ಆರೋಪಿ ತಲೆ ಮರೆಸಿಕೊಂಡಿದ್ದು ಪತ್ತೆಗಾಗಿ ಬಲೆ ಬೀಸಿದ್ದಾರೆ.
ದಾಳಿಯಲ್ಲಿ ಅಬಕಾರಿ ನಿರೀಕ್ಷಕರಾದ ಸುನೀಲ್ ಡಿ, ಉಪ ನಿರೀಕ್ಷಕ ಸಿದ್ದಯ್ಯ, ಪೇದೆಗಳಾದ ಪ್ರದೀಪ್, ರಮೇಶ್, ವಾಹನ ಚಾಲಕ ಮಂಜು ಪ್ರಸಾದ್ ಭಾಗವಹಿಸಿದ್ದರು.