News Karnataka Kannada
Tuesday, April 30 2024
ಚಾಮರಾಜನಗರ

ಹನೂರು: ಅಕ್ರಮ ಕಳ್ಳಭಟ್ಟಿ ಸಾರಾಯಿ ವಶ, ಆರೋಪಿ ಪರಾರಿ

Illegal spurious liquor seized, accused absconding
Photo Credit : By Author

ಹನೂರು: ಅಕ್ರಮವಾಗಿ ದಾಸ್ತಾನು ಮಾಡಿದ್ದ ಕಳ್ಳಭಟ್ಟಿ ಸಾರಾಯಿ ಹಾಗೂ ಬೆಲ್ಲದ ಕೊಳೆಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಮಾರಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅರ್ಧ ಲೀ ಕಳ್ಳ ಭಟ್ಟಿ ಸಾರಾಯಿ ಹಾಗೂ 10 ಲೀ ಬೆಲ್ಲದ ಕೊಳೆಮತ್ತು 8.640 ಲೀ ಮದ್ಯವನ್ನು ವಶ ಪಡಿಸಿಕೊಂಡಿದ್ದು ಆರೋಪಿ ಪರಾರಿಯಾಗಿದ್ದು ಪತ್ತೆಗಾಗಿ ಬಲೆ ಬೀಸಿದ್ದಾರೆ.

ಮಾರಳ್ಳಿ ಗ್ರಾಮದ ರವಿ ನಾಯ್ಕ ಮನೆಯಲ್ಲಿ ಅಕ್ರಮವಾಗಿ ಕಳ್ಳ ಭಟ್ಟಿ ಸಾರಾಯಿ ದಾಸ್ತಾನು ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೇಲೆ ಕೊಳ್ಳೇಗಾಲ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ಉಪ ನಿರೀಕ್ಷಕ ಸಿದ್ದಯ್ಯ ಅವರ ತಂಡ ರವಿ ನಾಯ್ಕ ಬಿನ್ ಲೇಟ್ ಕೃಷ್ಣ ನಾಯ್ಕ ಎಂಬುವವರ ಮನೆಯ ಮೇಲೆ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ದ್ರವ್ಯಗಳನ್ನು ವಶ ಪಡಿಸಿಕೊಂಡಿದ್ದು ಆರೋಪಿ ತಲೆ ಮರೆಸಿಕೊಂಡಿದ್ದು ಪತ್ತೆಗಾಗಿ ಬಲೆ ಬೀಸಿದ್ದಾರೆ.

ದಾಳಿಯಲ್ಲಿ ಅಬಕಾರಿ ನಿರೀಕ್ಷಕರಾದ ಸುನೀಲ್ ಡಿ, ಉಪ ನಿರೀಕ್ಷಕ ಸಿದ್ದಯ್ಯ, ಪೇದೆಗಳಾದ ಪ್ರದೀಪ್, ರಮೇಶ್, ವಾಹನ ಚಾಲಕ ಮಂಜು ಪ್ರಸಾದ್ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು