ಹನೂರು: ಮಳವಳ್ಳಿಯಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಭಾನುವಾರ ಹನೂರು ಪಟ್ಟಣಕ್ಕೆ ಆಗಮಿಸಿದ ಜೆಡಿಎಸ್ ಪಕ್ಷದ ಮಳವಳ್ಳಿ ಶಾಸಕ ಕೆ ಅನ್ನದಾನಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಎಂ ಆರ್ ಮಂಜುನಾಥ್ ಅವರು ಗೆಲ್ಲಬೇಕು ಹಾಗೂ ಎಚ್ ಡಿ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗಬೇಕು ಆಗ ಮತ್ತೊಮ್ಮೆ ಮಳವಳ್ಳಿಯಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುತ್ತೇನೆ ಎಂದರು.
ಮಳವಳ್ಳಿಯಿಂದ ಪಾದಯಾತ್ರೆ ಮೂಲಕ ಭಾನುವಾರ ಹನೂರು ಪಟ್ಟಣಕ್ಕೆ ಬಂದ ಮಳವಳ್ಳಿ ಶಾಸಕ ಕೆ ಅನ್ನದಾನಿಯವರನ್ನು ಹನೂರು ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ. ಆರ್.ಮಂಜುನಾಥ್ ಅವರು ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಇನ್ನಿತರ ಇದ್ದರು.