ಹನೂರು: ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಹೆಚ್ಚು ಮಾನವ ದಿನಗಳು ಸೃಜನೆಯಾಗಬೇಕು, ವೈಯಕ್ತಿಕ ಕಾಮಗಾರಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂವಿತ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅವರು ಮಾತನಾಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಹೆಚ್ಚು ಕೆಲಸಗಳನ್ನು ತೆಗೆದುಕೊಳ್ಳಬೇಕು. ಗ್ರಾಮಗಳಲ್ಲಿ ನೀರಿನ ಅಭಾವವನ್ನು ನೀಗಿಸಬೇಕು. ಗ್ರಂಥಾಲಯಗಳಲ್ಲಿ ಮಕ್ಕಳನ್ನು ನೋಂದಣಿ ಮಾಡಿಸಬೇಕು ಎಂದು ಹೇಳಿದರು. ಇದೇ ವೇಳೆ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಶಾಲಾ ಕಟ್ಟಡವನ್ನು ಪರಿಶೀಲನೆ ನಡೆಸಿದರಲ್ಲದೆ, ತದ ದುಸ್ಥಿತಿಯಲ್ಲಿರುವ ಕಟ್ಟಡವನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ಬೆಟ್ಟಕ್ಕೆ ಬರುವ ಪಾದಯಾತ್ರೆ ಭಕ್ತಾಧಿಗಳು ಊಟ ಮಾಡುವ ಸ್ಥಳದಲ್ಲಿ ಸ್ವಚ್ಛತೆ ಇರುವಂತೆ ನೋಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಸರಸ್ವತಿ, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ, ನರೇಗಾ ಸಹಾಯಕ ರವೀಂದ್ರ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ದೊರೆ ಮತ್ತು ಸಹಾಯಕ ಇಂಜಿನಿಯರ್ ಪ್ರೇಮ ಹಾಜರಿದ್ದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ