ಚಾಮರಾಜನಗರ: ಹನೂರು ಜೆಡಿಎಸ್ ಶಾಸಕ ಮಂಜುನಾಥ್ ಅವರು ಕ್ಷೇತ್ರದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಶಾಸಕ ನರೇಂದ್ರ ಆರೋಪ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಮಂಜುನಾಥ್ ವಿರುದ್ಧ ಕಿಡಿಕಾರಿದ ನರೇಂದ್ರ ಕ್ಷೇತ್ರದಲ್ಲಿ ದ್ವೇಷದ ರಾಜಕಾರಣ ಮಾಡುತ್ತ ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡ್ತಿದ್ದಾರೆ, ನಮ್ಮ ಕಾರ್ಯಕರ್ತರಿಗೆ ಸುಖಾಸುಮ್ಮನೆ ತೊಂದರೆ ಕೊಡುವುದಲ್ಲದೆ ಪೊಲೀಸ್ ಠಾಣೆಯನ್ನು ಸಹ ಪಕ್ಷದ ಕಚೇರಿ ಮಾಡಲು ಹೊರಟಿದ್ದಾರೆ.
ಆದ್ರೆ ನಾನು ಇರೋವರೆಗೂ ಅದು ಸಾಧ್ಯವಿಲ್ಲದ ಮಾತು, ನಮ್ಮ ಕಾರ್ಯಕರ್ತರು ತೊಂದರೆಗೊಳಗಾದರೆ ನನ್ನ ಗಮನಕ್ಕೆ ತನ್ನಿ ಎಂದು ಗುಡುಗಿದ್ದಾರೆ.