ಚಾಮರಾಜನಗರ: ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿ ಕಾವೇರಿ ಕಿಚ್ಚು ಹೆಚ್ಚಾದರೆ, ಗಡಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ.
ಕರ್ನಾಟಕ ತಮಿಳುನಾಡು ಗಡಿ ಭಾಗವಾಗಿರುವ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಾಳವಾಡಿ ಬಳಿಯ ನೈತಾಳಪುರಂ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ, ಸೇತುವೆ ಮುಳುಗಡೆಯಾಗಿದ್ದು, ಸೇತುವೆಯ ಮೇಲೆ ಮಳೆ ನೀರು ಹರಿಯುತ್ತಿದೆ.
ಇದರಿಂದಾಗಿ ಗುಡ್ಡಗಾಡು ಗ್ರಾಮಗಳ ನಡುವಿನ ಸಂಚಾರ ಸ್ಥಗಿತಗೊಂಡಿದೆ. ತಾಳವಾಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಈ ಪರಿಸ್ಥಿತಿಯಲ್ಲಿ ನೈತಾಳಪುರಂ ಭಾಗದಲ್ಲಿ ಸುರಿದ ಭಾರೀ ಮಳೆಗೆ ಅರಣ್ಯ ಪ್ರದೇಶದಲ್ಲಿನ ಸೇತುವೆ ನೀರಿನ ಪ್ರವಾಹಕ್ಕೆ ಮುಳುಗಿದೆ. ಇದರಿಂದ ಗುಡ್ಡಗಾಡು ಗ್ರಾಮಗಳಲ್ಲಿ ವಾಹನಗಳು ಸಂಚರಿಸಲು ಸಾಧ್ಯವಾಗದೆ ಸಂಚಾರ ಸ್ಥಗಿತಗೊಂಡಿದ್ದು ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.