ಚಾಮರಾಜನಗರ

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ನಿಷೇಧ ಆದೇಶ ಹಿಂಪಡೆದ ತಹಸೀಲ್ದಾರ್

ಗುಂಡ್ಲುಪೇಟೆ: ಸಾರ್ವಜನಿಕರು ಹಾಗೂ ಭಕ್ತಾದಿಗಳಿಂದ ಬಾರಿ ಟೀಕೆ ವ್ಯಕ್ತವಾದ ಹಿನ್ನೆಲೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3ಗಂಟೆಯೊಳಗೆ ಬಸ್ ಸಂಚಾರ ನಿಷೇಧಿಸಿ ಹೊರಡಿಸಿದ ಆದೇಶವನ್ನು ತಹಸೀಲ್ದಾರ್ ಟಿ.ರಮೇಶ್ ಬಾಬು ‌ಒಂದೇ‌‌ ದಿನಕ್ಕೆ ಹಿಂಪಡೆದಿದ್ದಾರೆ ಈ ಮೂಲಕ ಪ್ರವಾಸಿಗರಿಗೆ ಗೋಪಾಲನ ದರ್ಶನ ಎಂದಿನಂತೆ ಸಿಗಲಿದೆ.

ವಿವಿಧ ಕಾರಣ ನೀಡಿ ತಾಲ್ಲೂಕು ಆಡಳಿತ ಹಾಗೂ ತಹಸೀಲ್ದಾರ್ ಟಿ.ರಮೇಶ್ ಬಾಬು ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3 ಗಂಟೆಗೆ ಬಸ್ ಸಂಚಾರ ನಿಷೇದಿಸಿ ಗುರುವಾರ ಆದೇಶ ಹೊರಡಿಸಿದ್ದರು ಆದರೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು ಜೊತೆಗೆ ಕನ್ನೇಗಾಲ ಗ್ರಾಮಸ್ಥರು ಸ್ವತಃ ತಹಸೀಲ್ದಾರ್ ಬಳಿ ಆದೇಶ ಹಿಂಪಡೆಯುವಂತೆ ಲಿಖಿತ ಮನವಿ ಸಲ್ಲಿಸಿದ್ದರು. ‌ಈ‌ ಕುರಿತು ತಹಸೀಲ್ದಾರ್ ಟಿ.ರಮೇಶ್ ಬಾಬು ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಅವರ ಸೂಚನೆಯ ಮೇರೆಗೆ ಈ ಹಿಂದೆ ಇದ್ದ ನಿಯಮದಂತೆ 4ಗಂಟೆಯವರೆಗೆ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟು ಹೊಸ ಆದೇಶವನ್ನು ಹಿಂಪಡೆದಿದ್ದಾರೆ.ಜೊತೆಗೆ ಅರಣ್ಯ ಇಲಾಖೆಯಿಂದ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸಿ ಪ್ರಸಾದ ತಿನ್ನಲು ಬರುವ ಕಾಡಾನೆಯ ಮೇಲೆ ಹಾಗೂ ನಿಗಾವಹಿಸುವಂತೆ ಸೂಚಿಸಿದ್ದಾರೆ.

ಈ ಕುರಿತು ತಹಸೀಲ್ದಾರ್ ಟಿ.ರಮೇಶ್ ಬಾಬು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ದೂರದ ಊರುಗಳಿಂದ ಬರುವ ಪ್ರವಾಸಿಗರು ,ಭಕ್ತಾದಿಗಳು ‌ಹಾಗೂ ಸಾರ್ವಜನಿಕರಿಗೆ 3ಗಂಟೆಯೊಳಗೆ ಬಸ್ ಸಂಚಾರ ನಿಷೇಧದ ಆದೇಶದಿಂದ‌ ಸಮಸ್ಯೆಯಾಗುತ್ತದೆ ಎಂದು ದೂರುಗಳು ಕೇಳಿಬಂದ ಹಿನ್ನೆಲೆ ಜೊತೆಗೆ ಪ್ರವಾಸಿಗರ ಅನುಕೂಲತೆಯ‌ ಉದ್ದೇಶದಿಂದ ಹೊಸ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

Gayathri SG

Recent Posts

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

10 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

23 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

11 hours ago