News Karnataka Kannada
Monday, April 29 2024
ಚಾಮರಾಜನಗರ

ಚಾಮರಾಜನಗರದಲ್ಲಿ ವಾಯು ಸೇನೆ ವಿಮಾನ ಪತನ: ತಾಂತ್ರಿಕ ದೋಷದಿಂದ ಸುಟ್ಟುಕರಕಲಾದ ವಿಮಾನ

lightweight Kiran trainer aircraft crashed into an open field at Bhogapura in Karnataka's Chamarajanagar district on Thursday.
Photo Credit :

ಚಾಮರಾಜನಗರ: ಜಿಲ್ಲೆಯ ಭೋಗಪುರದ ಬಳಿ ಭಾರತದ ವಾಯು ಸೇನೆಯ ಲಘು ವಿಮಾನ ಜೂನ್ ೧ರ ಮದ್ಯಾಹ್ನ ಪತನವಾಗಿದೆ. ಸದ್ಯ ಈ ಘಟನೆಯಲ್ಲಿ ಪೈಲಟ್‌ಗಳಿಬ್ಬರೂ ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಬ್ಬ ಮಹಿಳಾ ಪೈಲಟ್ ಮತ್ತು ಒಬ್ಬ ಪುರುಷ ಪೈಲಟ್ ವಿಮಾನದಲ್ಲಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

ಚಾಮರಾಜನಗರ ಜಿಲ್ಲೆಯ ಭೋಗಪುರದ ಬಳಿ ಜಮೀನುವೊಂದರಲ್ಲಿ ಲಘು ವಿಮಾನ ಪತನವಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸರು ದೌಡಾಯಿಸಿದ್ದಾರೆ.ಇದೀಗ ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಇನ್ನು ವಿಮಾನದಲ್ಲಿದ್ದ ಪೈಲಟ್‌ಗಳಿಬ್ಬರೂ ಪ್ಯಾರಾಚೋಟ್ ಮೂಲಕ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಅಧಿಕಾರಿಗಳ ಪ್ರಕಾರ, ತರಬೇತಿ ವಿಮಾನವು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಬೆಳಿಗ್ಗೆ ಟೇಕಾಫ್ ಆಗಿತ್ತು. ವಿಮಾನವು ತಾಂತ್ರಿಕ ದೋಷದಿಂದ ಪತನಗೊಂಡಿದ್ದು, ಬೆಂಕಿಯಿಂದ ವಿಮಾನ ಸುಟ್ಟು ಕರಕಲಾಗಿದೆ. ವಿಮಾನದ ಭಾಗಗಳು ಸ್ಥಳದ ಸುತ್ತಲೂ ಹರಡಿಕೊಂಡಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು