ಚಾಮರಾಜನಗರ: ಜಿಲ್ಲೆಯ ಭೋಗಪುರದ ಬಳಿ ಭಾರತದ ವಾಯು ಸೇನೆಯ ಲಘು ವಿಮಾನ ಜೂನ್ ೧ರ ಮದ್ಯಾಹ್ನ ಪತನವಾಗಿದೆ. ಸದ್ಯ ಈ ಘಟನೆಯಲ್ಲಿ ಪೈಲಟ್ಗಳಿಬ್ಬರೂ ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಬ್ಬ ಮಹಿಳಾ ಪೈಲಟ್ ಮತ್ತು ಒಬ್ಬ ಪುರುಷ ಪೈಲಟ್ ವಿಮಾನದಲ್ಲಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.
ಚಾಮರಾಜನಗರ ಜಿಲ್ಲೆಯ ಭೋಗಪುರದ ಬಳಿ ಜಮೀನುವೊಂದರಲ್ಲಿ ಲಘು ವಿಮಾನ ಪತನವಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸರು ದೌಡಾಯಿಸಿದ್ದಾರೆ.ಇದೀಗ ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಇನ್ನು ವಿಮಾನದಲ್ಲಿದ್ದ ಪೈಲಟ್ಗಳಿಬ್ಬರೂ ಪ್ಯಾರಾಚೋಟ್ ಮೂಲಕ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಅಧಿಕಾರಿಗಳ ಪ್ರಕಾರ, ತರಬೇತಿ ವಿಮಾನವು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಬೆಳಿಗ್ಗೆ ಟೇಕಾಫ್ ಆಗಿತ್ತು. ವಿಮಾನವು ತಾಂತ್ರಿಕ ದೋಷದಿಂದ ಪತನಗೊಂಡಿದ್ದು, ಬೆಂಕಿಯಿಂದ ವಿಮಾನ ಸುಟ್ಟು ಕರಕಲಾಗಿದೆ. ವಿಮಾನದ ಭಾಗಗಳು ಸ್ಥಳದ ಸುತ್ತಲೂ ಹರಡಿಕೊಂಡಿವೆ.