News Karnataka Kannada
Wednesday, May 08 2024
ಚಾಮರಾಜನಗರ

ಗಡಿಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ

ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಜಿಲ್ಲೆಗಳ ಗಡಿಭಾಗಗಳಲ್ಲಿ ಕಟ್ಟುನಿಟ್ಟಾಗಿ  ತಪಾಸಣಾ ಕಾರ್ಯವನ್ನು ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಮಂಡ್ಯದ ಜಿಲ್ಲಾಧಿಕಾರಿ ಡಾ. ಕುಮಾರ್  ಅವರು ಅಧಿಕಾರಿಗಳಿಗೆ ಸೂಚಿಸಿದರು.
Photo Credit : By Author

ಚಾಮರಾಜನಗರ: ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ  ಜಿಲ್ಲೆಗಳ ಗಡಿಭಾಗಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣಾ ಕಾರ್ಯವನ್ನು ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾಧಿಕಾರಿ  ಶಿಲ್ಪಾ ನಾಗ್ ಹಾಗೂ ಮಂಡ್ಯದ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೊಳ್ಳೇಗಾಲ ತಾಲೂಕಿನ ಭರಚುಕ್ಕಿಯ ಮಯೂರ ಸಭಾಂಗಣದಲ್ಲಿ ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆ  ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಕುರಿತು ನಡೆದ ಅಂತರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಉಭಯ ಜಿಲ್ಲಾಧಿಕಾರಿಗಳು ಮಾತನಾಡಿ, ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಕಟ್ಟುನಿಟ್ಟಾಗಿ ಮಾದರಿ ನೀತಿಸಂಹಿತೆ ಪಾಲನೆ ಮಾಡಬೇಕಿದೆ.

ಚಾಮರಾಜನಗರ, ಮಂಡ್ಯ ಜಿಲ್ಲೆಗಳನ್ನು ಸಂಪರ್ಕಿಸುವ ಗಡಿಭಾಗಗಳ ಚೆಕ್‌ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ  ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಪರಸ್ಪರ ಸಮನ್ವಯ ಸಹಕಾರದಿಂದ ಅತ್ಯಂತ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಗಳ ಗಡಿ ಭಾಗದಲ್ಲಿ ಬರುವ ಚೆಕ್‌ ಪೋಸ್ಟ್ ಗಳು 24*7 ಅವಧಿಯಲ್ಲೂ ಕಾರ್ಯನಿರ್ವಹಿಸಬೇಕು. ವ್ಯಾಪಕವಾಗಿ  ವಾಹನಗಳ ತಪಾಸಣೆ ಮಾಡಬೇಕು. ಗೂಡ್ಸ್ ವಾಹನಗಳಲ್ಲಿ ಸಾಗಿಸಲಾಗುವ ಸಾಮಗ್ರಿಗಳನ್ನು ಪರಿಶೀಲಿಸಬೇಕು. ಸೂಕ್ತ ದಾಖಲೆಗಳು ಇವೆಯೇ ಎಂದು ಪರಿಶೀಲಿಸಬೇಕು. ವಾಣಿಜ್ಯ ತೆರಿಗೆ ಅಧಿಕಾರಿಗಳ ತಂಡ ಸಹ ಸಂಪೂರ್ಣವಾಗಿ ಪರಿಶೀಲನೆ ಮಾಡಬೇಕು ಎಂದು ತಿಳಿಸಿದರು.

ಚೆಕ್‌ ಪೋಸ್ಟ್ ಗಳಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುವ ಹಣ, ಅಕ್ರಮ ಮದ್ಯ, ಆಮಿಷ ಉಡುಗೊರೆ ವಸ್ತುಗಳು ಕಂಡು  ಬಂದಲ್ಲಿ ಕೂಡಲೇ ಕ್ರಮ ಜರುಗಿಸಬೇಕು. ಎರಡು ಜಿಲ್ಲೆಗಳ ಅಧಿಕಾರಿಗಳು ಸೂಕ್ತ ಮಾಹಿತಿ ವಿನಿಮಯ ಮಾಡಿಕೊಂಡು ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಉಭಯ ಜಿಲ್ಲೆಗಳ ಗಡಿ ಭಾಗಗಳಲ್ಲಿ ವಿಶೇಷ ಕಣ್ಗಾವಲು ಇರಬೇಕು. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ  ಚುನಾವಣಾ ಪ್ರಕ್ರಿಯೆಗೆ ಪೂರಕವಾಗುವಂತೆ ಹಾಗೂ ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಚಾಮರಾಜನಗರ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಎಂ. ಶಿವಮೂರ್ತಿ, ಮಂಡ್ಯ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಉಭಯ ಜಿಲ್ಲೆಗಳ ಅಬಕಾರಿ, ಕಂದಾಯ, ಪೊಲೀಸ್, ಸಹಾಯಕ ಚುನಾವಣಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು