News Karnataka Kannada
Saturday, May 11 2024
ಚಾಮರಾಜನಗರ

ಚಾಮರಾಜನಗರ: ಹುಟ್ಟುಹಬ್ಬದಂದೇ ಉಪನ್ಯಾಸಕಿ ಆತ್ಮಹತ್ಯೆ

Lecturer committed suicide on birthday
Photo Credit : By Author

ಚಾಮರಾಜನಗರ: ತನ್ನ್ಮ ಜನ್ಮ ದಿನದಂದೇ ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ಮಂಗಳವಾರ ನಡೆದಿದೆ.

ಚಾಮರಾಜನಗರದ ಜೆಎಸ್‌ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಅವಿವಾಹಿತೆಯಾಗಿದ್ದ ಚಂದನಾ ಯಳಂದೂರು ತಾಲ್ಲೂಕು ಅಂಬಳೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಮಹದೇವಸ್ವಾಮಿ ಎಂಬುವರ ಪುತ್ರಿಯಾಗಿದ್ದಾರೆ.

ಚಾಮರಾಜನಗರದ ಜೆಎಸ್‌ಎಸ್ ಕಾಲೇಜು ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ವಾಸವಿದ್ದ ಅವರು, ಮಂಗಳವಾರ ಬೆಳಿಗ್ಗೆ ಸುಮಾರು ೧೦ ಗಂಟೆ ಸಮಯದಲ್ಲಿ ಘಟನೆ ನಡೆದಿರಬಹುದೆಂದು ಹೇಳಲಾಗಿದೆ. ಬೆಳಗ್ಗೆ ೧೧.೩೦ ಆದರೂ ಚಂದನಾ ಅವರು ಹಾಸ್ಟೆಲ್ ರೂಮಿನಿಂದ ಹೊರಬಾರದ ಕಾರಣ ವೆಂಟಿಲೇಟರ್ ಮೂಲಕ ನೋಡಿದಾಗ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.

ನಿಖರ ಕಾರಣ ತಿಳಿಸಿಲ್ಲ. ಇಂದು ಅವರ ಜನ್ಮದಿನವಾಗಿದ್ದು ಹಾಸ್ಟೆಲ್ ಸಹೋದ್ಯೋಗಿಗಳುವ ಬೆಳಿಗ್ಗೆ ಶುಭ ಕೋರಿದ್ದಾರೆ. ತಿಂಡಿಗೆ ಕರೆದಾಗ ನನ್ನ ಮೂಡ್ ಚೆನ್ನಾಗಿಲ್ಲ ಆಮೇಲೆ ಬರುತ್ತೇನೆ ಎಂದು ಹೇಳಿದ್ದಾರೆ. ಕೆಲ ಸಮಯದ ಬಳಿಕ ಸಾವಿಗೆ ಶರಣಾಗಿದ್ದಾರೆ. ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು