News Karnataka Kannada
Sunday, April 28 2024
ಚಾಮರಾಜನಗರ

ಒಂದು ತಿಂಗಳಿಂದ ಉಪಟಳ ಕೊಡುತ್ತಿದ್ದ ಚಿರತೆ ಸೆರೆ: ಜನರು ನಿರಾಳ

ಒಂದು ತಿಂಗಳಿನಿಂದ ರೈತರು, ಜನರಿಗೆ ಉಪಟಳ ಕೊಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ನಡೆದಿದೆ.
Photo Credit : News Kannada

ಚಾಮರಾಜನಗರ: ಒಂದು ತಿಂಗಳಿನಿಂದ ರೈತರು, ಜನರಿಗೆ ಉಪಟಳ ಕೊಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ನಡೆದಿದೆ.

ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನಲ್ಲಿ ಚಿರತೆ ಕಳೆದ ತಿಂಗಳು ನಾಲ್ಕು ಕುರಿಗಳನ್ನು ತಿಂದು ಈ ಭಾಗದಲ್ಲಿ ಗ್ರಾಮಸ್ಥರ ನಿದ್ದೆಗೆಡಿಸಿತ್ತು‌.

ಕಳೆದ ಒಂದು ತಿಂಗಳಿನಿಂದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇಟ್ಟು ಕಾರ್ಯಾಚರಣೆಯ ಕೈಗೊಂಡಿದ್ದರು‌. ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿಯಲು ಕೊನೆಗೂ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ.

ಬೋನಿಗೆ ಬಿದ್ದ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನ ಇಲ್ಲವೇ ಮೈಸೂರು ಮೃಗಾಲಯಕ್ಕೆ ಬಿಡಬೇಕು, ಬೇರೆ ಅರಣ್ಯಕ್ಕೆ ಬಿಡಬೇಡಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು