News Karnataka Kannada
Saturday, May 11 2024
ಚಾಮರಾಜನಗರ

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಲಾರಿ: ವಾಹನ ಸಂಚಾರಕ್ಕೆ ಅಡ್ಡಿ

Lorry overturns after driver loses control, disrupts vehicular traffic
Photo Credit : News Kannada

ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಉರುಳಿದ ಘಟನೆ ಚಾಮರಾಜನಗರ ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಹರಿಯಾಣದಿಂದ ತಮಿಳುನಾಡಿಗೆ ಸರಕು ತುಂಬಿದ್ದ ಲಾರಿ ಚಾಮರಾಜನಗರ ಮಾರ್ಗವಾಗಿ ತೆರಳುವಾಗ ಚಾಮರಾಜನಗರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 209 ರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಲಾರಿ ಉರುಳಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.

ಸಕಾಲಕ್ಕೆ ಸಂಚಾರಿ ಪೊಲೀಸರು ಆಗಮಿಸಿ ರಸ್ತೆಯಲ್ಲಿ ಉರುಳಿ ಬಿದ್ದ ಲಾರಿಯನ್ನು ಕ್ರೇನ್ ಮೂಲಕ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಲಾರಿ ಉರುಳಿದ್ದರಿಂದ ಚಾಲಕನಿಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು