ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯದ ಘಾಟು ಹೆಚ್ಚಾಗುತ್ತಿದೆ. ಈ ಹಿಂದೆ ಸಿಎಂ ಸಿದ್ದರಾಮಯ್ಯ ಮಾದಪ್ಪನ ಸನ್ನಿಧಾನಕ್ಕೆ ಬಂದಾಗ ಈ ಕುರಿತು ಚರ್ಚೆ ನಡೆಸಿ ಅಬಕಾರಿ ಇಲಾಖೆಗೆ ಖಡಕ್ ವಾರ್ನಿಂಗ್ ನೀಡಿದ್ದರು.
ಈಗ ಅಬಕಾರಿ ಇಲಾಖೆ ಫುಲ್ ಆಕ್ಟಿವ್ ಆಗಿದ್ದು ಮದ್ಯ ಮುಕ್ತ ಮಹದೇಶ್ವರ ಬೆಟ್ಟ ಮಾಡಲು ಮುಂದಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ.
ಪ್ರವಾಸಿಗರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಮೂಲಕ ಸ್ಥಳೀಯವಾಗಿ ಕೆಲ ಅಂಗಡಿ ವ್ಯಾಪಾರಸ್ಥರು ಅಕ್ರಮವಾಗಿ ಹಣ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಸಿಎಂ ಖಡಕ್ ವಾರ್ನಿಂಗ್ ಬಳಿಕ ಈಗ ಅಬಕಾರಿ ಇಲಾಖೆ ಸ್ಪೆಷಲ್ ಡ್ರೈವ್ ಅಭಿಯಾನದ ಮೂಲಕ ಮದ್ಯ ಮುಕ್ತ ಮಹದೇಶ್ವರ ಬೆಟ್ಟವನ್ನಾಗಿಸಲು ಮುಂದಾಗಿದ್ದಾರೆ.
ಅಬಕಾರಿ ಇಲಾಖೆ ವಿಶೇಷ ತಂಡವನ್ನ ಮಾಡಿಕೊಂಡು ಸ್ಪೆಷಲ್ ಡ್ರೈವ್ ಮಾಡುತ್ತಿದೆ . ಅಕ್ರಮವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಕೇಸ್ ಬುಕ್ ಮಾಡುವ ಮೂಲಕ ಬಿಸಿ ಮುಟ್ಟಿಸಿದೆ.
ಜೊತೆಗೆ ಮದ್ಯ ಮಾರಾಟಗಾರರ ಸಂಘದವರ ಜತೆ ಸಭೆ ನಡೆಸಿ ಯಾವುದೇ ಕಾರಣಕ್ಕೂ ಮಲೆ ಮಹದೇಶ್ವರ ಬೆಟ್ಟದ ಅಂಗಡಿ ಮಾಲೀಕರಿಗೆ ಲಿಕ್ಕರ್ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯ ಸರಬರಾಜು ಆಗದಂತೆ ಎಚ್ಚರಿಕೆ ನೀಡಿದ್ದಾರೆ.