News Karnataka Kannada
Thursday, May 02 2024
ಚಾಮರಾಜನಗರ

ಚಿನ್ನದ ಬೆಳೆ ನಾಶ ಮಾಡಿದ ಕಿಡಿಗೇಡಿಗಳು: ನಿಜಕ್ಕೂ ಅಲ್ಲಿ ಆಗಿದ್ಧೇನು

Miscreants who destroyed the gold crop: What really happened there
Photo Credit : News Kannada

ಚಾಮರಾಜನಗರ: 1.5 ಎಕರೆ ಪ್ರದೇಶದಲ್ಲಿ ಫಸಲಿಗೆ ಬಂದಿದ್ದ ಟೊಮೊಟೋ ಬೆಳೆಯನ್ನು ಕಿಡಿಗೇಡಿಗಳು ನಾಶ ಮಾಡಿರುವ ಘಟನೆ ಹರವೇ ಸಮೀಪದ ಕೆಬ್ಬೆಪುರ ಗ್ರಾಮದಲ್ಲಿ ನಡೆದಿದೆ.  ಮಂಜು ಅವರ ಪುತ್ರ ಕರಿಯಪ್ಪ ಎಂಬುವವರು ತಮ್ಮ ಜಮೀನಿನಲ್ಲಿ 1.5 ಎಕರೆಯಲ್ಲಿ ಟೊಮೊಟೋ ಬೆಳೆ ಬೆಳೆದಿದ್ದರು.

ಬುಧವಾರ ಮೊದಲ ಫಸಲನ್ನು ಕ್ಯುಯ್ದು ಮಾರುಕಟ್ಟೆಗೆ ಹಾಕಿ ಸಂತಸದಿಂದ್ದರು. ಆದರೆ ಬುಧವಾರ ರಾತ್ರಿ ಅಪರಿಚಿತ ಕಿಡಿಗೇಡಿಗಳು ಟೊಮೊಟೊ ಬೆಳೆ ಮೇಲೆ ದಾಳಿ ಮಾಡಿದ್ದು, ಟೊಮೊಟೋ ಗಿಡಗಳನ್ನು ಕತ್ತರಿಸಿ ಹಾಳು ಮಾಡಿದ್ದಾರೆ. ಇನ್ನು ಕೆಲವು ಗಿಡಗಳಿಗೆ ಕಟ್ಟಿದ್ದ ತಂತಿಯನ್ನು ಕಿತ್ತುಹಾಕಿ ನೆಲಸಮ ಮಾಡಿ ಬೆಳೆ ನಾಶ ಮಾಡಿದ್ದಾರೆ.

1.5 ಎಕರೆ ಜಮೀನಿನಲ್ಲಿ ಟೊಮೊಟೋ ಗಿಡ ಹಾಕಲು ಮಂಜು ಅವರು ಸುಮಾರು 1 ಲಕ್ಷ ರೂ. ಗಿಂತ ಹೆಚ್ಚು ಖರ್ಚು ಮಾಡಿದ್ದರು. ಆದರೆ ಫಸಲಿಗೆ ಬಂದಿದ್ದ ಟೊಮೊಟೋ ಬೆಳೆ ನಾಶವಾಗಿರುವುದರಿಂದ ಅಂದಾಜು 10 ಲಕ್ಷ ರೂ. ನಷ್ಟವಾಗಿದೆ. ಫಸಲಿಗೆ ಬಂದಿದ್ದ ಬೆಳೆ ನಾಶವಾಗಿರುವುದರಿಂದ ರೈತ ಮಂಜು ಕಂಗಲಾಗಿದ್ದಾರೆ. ಸ್ಥಳಕ್ಕೆ ಬೇಗೂರು ಠಾಣೆಯ ಪಿಎಸ್ಐ ಕಿರಣ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು