ಹುಲಿ ದಾಳಿಗೆ ಮೃತಪಟ್ಟ ಮೂರು ತಿಂಗಳ ಕಂದನಿಗಾಗಿ ತಾಯಿ ಆನೆ ಚೀರಾಟ

ಗುಂಡ್ಲುಪೇಟೆ : ಕಂದನಿಗಾಗಿ ಗಂಟೆಗಟ್ಟಲೆ ರಸ್ತೆ ಬದಿಯಲ್ಲೇ ನಿಂತು ಮೃತಪಟ್ಟ ಕರುಳ ಬಳ್ಳಿಗಾಗಿ ತಾಯಿಯಾನೆ ಚೀರಾಟ, ಇತ್ತ ಸುಮಾರು 4 ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತ ಈ ಮನಕಲಕುವ ದೃಶ್ಯ ಕಂಡುಬಂದಿದ್ದು ಗುಂಡ್ಲುಪೇಟೆ ತಾಲೂಕಿನ ಪ್ರತಿಷ್ಠಿತ ವನ್ಯಜೀವಿ ತಾಣ ಬಂಡೀಪುರದಲ್ಲಿ ಮರಿಯನ್ನ ಕಳೆದುಕೊಂಡ ತಾಯಿ ಆನೆ ರೋಧನೆಯನ್ನ ಕಣ್ಣಾರೆ ಕಂಡ ಜನರು ಮರುಗಿದ್ದಾರೆ.

ಈ ದೃಶ್ಯ ಕಂಡುಬಂದಿದ್ದು ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ, ಮೂರು ತಿಂಗಳ ಮರಿಯಾನೆ ಮೇಲೆ ಎರಗಿದ ಹುಲಿ ಭೀಕರ ದಾಳಿ ನಡೆಸಿದೆ, ಹುಲಿ ದಾಳಿಯ ತೀವ್ರತೆಗೆ ಮರಿಯಾನೆ ಮೃತಪಟ್ಟಿದೆ ಆದರೆ ತಾಯಿ ಆನೆ ತನ್ನ ಮರಿಯನ್ನ ಎಬ್ಬಿಸಲು ಪ್ರಯತ್ನ ಪಡುತ್ತಿರುವ ದೃಶ್ಯ ಮನಕಲಕುವಂತಿದೆ.

ತನ್ನ ಕರುಳ ಬಳ್ಳಿಯನ್ನ ಕಳೆದುಕೊಂಡ ತಾಯಿ ಆನೆ ರಸ್ತೆಬದಿಯಲ್ಲೇ ನಿಂತು ಮರಿಯನ್ನ ಎಬ್ಬಿಸಲು ಪ್ರಯತ್ನ ಪಡುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಸದ್ಯಕ್ಕೆ ಮೃತಪಟ್ಟಿರುವ ಮರಿಯಾನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾಡಿನ ಒಳಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ.

Chaitra Kulal

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago