ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಕೇಂದ್ರ ಜಾನಪದ ವಿಭಾಗದ ವತಿಯಿಂದ ಬಿ ಎಂ ಶ್ರೀ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಾನಪದ ಕಲಾಪ್ರಕಾರಗಳ ತರಬೇತಿ ಶಿಬಿರ ಸಮಾರೋಪ ಸಮಾರಂಭದಲ್ಲಿ ಅಂತರಾಷ್ಟ್ರೀಯ ಜಾನಪದ ಗಾಯಕ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಸಿಎಂ ನರಸಿಂಹಮೂರ್ತಿಯವರಿಗೆ ಮೈಸೂರು ವಿಶ್ವವಿದ್ಯಾನಿಲಯದ ಕುಲ ಸಚಿವರಾದ ಪ್ರೊ. ಆರ್ ಶಿವಪ್ಪ ಮತ್ತು ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ ಅವರು ಜಾನಪದ ಜೀವಾಳ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಸಿದ್ಧ ಜಾನಪದ ಗಾಯಕರಾದ ಡಾ. ಮಳವಳ್ಳಿ ಮಹಾದೇವಸ್ವಾಮಿ, ಕೀಲಾರ ಕೃಷ್ಣೆಗೌಡ, ದೇವಾನಂದವರ ಪ್ರಸಾದ್, ಮೈಸೂರು ಮಹಾಲಿಂಗ ಸೋಮಶೇಖರ ಮಲಾರ, ಸೋಬಾನೆ ಹೊನ್ನಮ್ಮ ಅವರಿಗೆ ಇದೇ ಸಂದರ್ಭದಲ್ಲಿ ಜಾನಪದ ಜೀವಾಳ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಚೈತ್ರನಾರಾಯಣ್ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ ವಿಜಯ್ ಕುಮಾರಿ ಕರಿಕಲ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ ಜಾನಪದ ವಿಭಾಗದ ಮುಖ್ಯಸ್ಥ ಪ್ರೊ ನಂಜಯ್ಯ ಹೊಂಗನೂರು ಜಾನಪದ ಸಂಶೋಧಕ ಸುಂದರೇಶ್ ಮೊದಲಾದವರು ಹಾಜರಿದ್ದರು.