News Karnataka Kannada
Sunday, May 05 2024
ಚಾಮರಾಜನಗರ

ಚಾಮರಾಜನಗರ: ನರಸಿಂಹಮೂರ್ತಿಗೆ ಜಾನಪದ ಜೀವಾಳ ಪ್ರಶಸ್ತಿ

Narasimhamurthy to be honoured with Janapada Jeevaala Award
Photo Credit : By Author

ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಕೇಂದ್ರ ಜಾನಪದ ವಿಭಾಗದ ವತಿಯಿಂದ ಬಿ ಎಂ ಶ್ರೀ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಾನಪದ ಕಲಾಪ್ರಕಾರಗಳ ತರಬೇತಿ ಶಿಬಿರ ಸಮಾರೋಪ ಸಮಾರಂಭದಲ್ಲಿ ಅಂತರಾಷ್ಟ್ರೀಯ ಜಾನಪದ ಗಾಯಕ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಸಿಎಂ ನರಸಿಂಹಮೂರ್ತಿಯವರಿಗೆ ಮೈಸೂರು ವಿಶ್ವವಿದ್ಯಾನಿಲಯದ ಕುಲ ಸಚಿವರಾದ ಪ್ರೊ. ಆರ್ ಶಿವಪ್ಪ ಮತ್ತು ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ ಅವರು ಜಾನಪದ ಜೀವಾಳ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಸಿದ್ಧ ಜಾನಪದ ಗಾಯಕರಾದ ಡಾ. ಮಳವಳ್ಳಿ ಮಹಾದೇವಸ್ವಾಮಿ, ಕೀಲಾರ ಕೃಷ್ಣೆಗೌಡ, ದೇವಾನಂದವರ ಪ್ರಸಾದ್, ಮೈಸೂರು ಮಹಾಲಿಂಗ ಸೋಮಶೇಖರ ಮಲಾರ, ಸೋಬಾನೆ ಹೊನ್ನಮ್ಮ ಅವರಿಗೆ ಇದೇ ಸಂದರ್ಭದಲ್ಲಿ ಜಾನಪದ ಜೀವಾಳ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಚೈತ್ರನಾರಾಯಣ್ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ ವಿಜಯ್ ಕುಮಾರಿ ಕರಿಕಲ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ ಜಾನಪದ ವಿಭಾಗದ ಮುಖ್ಯಸ್ಥ ಪ್ರೊ ನಂಜಯ್ಯ ಹೊಂಗನೂರು ಜಾನಪದ ಸಂಶೋಧಕ ಸುಂದರೇಶ್ ಮೊದಲಾದವರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು