News Karnataka Kannada
Tuesday, April 30 2024
ಚಾಮರಾಜನಗರ

ಸಿಂಚನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ತಾಲೂಕಿನ ಭೋಗಯ್ಯನಹುಂಡಿ ಗ್ರಾಮದ ಶಿಕ್ಷಕಿ ರೇಖಾ ಸೋಮಶೇಖರ್ ಅವರ ಪುತ್ರಿ ಸಿಂಚನ ಅವರು ದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ವಸ್ತು ಪ್ರದರ್ಶನದಲ್ಲಿ ಸಂಶೋಧನೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಮಾದರಿಯನ್ನು ಪ್ರಸ್ತುತ ಪಡಿಸಿದ್ದರು , ಪ್ರದರ್ಶನಕ್ಕೆ ಆಗಮಿಸಿದ್ದ ಪ್ರದಾನ ಮಂತ್ರಿ ನರೇಂದ್ರ ಮೋದಿಯವರು ಸಿಂಚನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು ಇದಾದ ಬೆನ್ನಲ್ಲೇ ಸಿಂಚನಾಗೆ ಅಭಿನಂದನೆ ಮಹಾಪೂರ ಹರಿದುಬಂದಿದೆ.
Photo Credit : News Kannada

ಗುಂಡ್ಲುಪೇಟೆ: ತಾಲೂಕಿನ ಭೋಗಯ್ಯನಹುಂಡಿ ಗ್ರಾಮದ ಶಿಕ್ಷಕಿ ರೇಖಾ ಸೋಮಶೇಖರ್ ಅವರ ಪುತ್ರಿ ಸಿಂಚನ ಅವರು ದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ವಸ್ತು ಪ್ರದರ್ಶನದಲ್ಲಿ ಸಂಶೋಧನೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಮಾದರಿಯನ್ನು ಪ್ರಸ್ತುತ ಪಡಿಸಿದ್ದರು , ಪ್ರದರ್ಶನಕ್ಕೆ ಆಗಮಿಸಿದ್ದ ಪ್ರದಾನ ಮಂತ್ರಿ ನರೇಂದ್ರ ಮೋದಿಯವರು ಸಿಂಚನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು ಇದಾದ ಬೆನ್ನಲ್ಲೇ ಸಿಂಚನಾಗೆ ಅಭಿನಂದನೆ ಮಹಾಪೂರ ಹರಿದುಬಂದಿದೆ.

ಚಾಮರಾಜನಗರದ ವಂಡರಬಾಳು ಜವಹಾರ್ ನವೋದಯ ವಿದ್ಯಾಲಯದಲ್ಲಿ ಪ್ರಥಮ.ಪಿಯುಸಿ ವ್ಯಾಸಂಗ ಮಾಡುತ್ತಿರುವ ಸಿಂಚನಾ ಜೀವಶಾಸ್ತ್ರ ಶಿಕ್ಷಕ ಶಶಿಧರ್ ಮಾರ್ಗದರ್ಶನದಲ್ಲಿ ಮಾಡೆಲ್ ಗಳನ್ನ ತಯಾರಿಸಿ ರಾಷ್ಟ್ರ ಮಟ್ಟದ ವಸ್ತುಪ್ರದರ್ಶನದಲ್ಲಿ ಭಾಗವಹಿಸಿ ಪ್ರದಾನಮಂತ್ರಿಗಳ ಮೆಚ್ಚುಗೆಗೆ ಪಾತ್ರವಾಗುವ ಮೂಲಕ ಜಿಲ್ಲೆಯ ಕೀರ್ತಿಯನ್ನ ಹೆಚ್ಜಿಸಿದ್ದಾರೆ.

ಈ ಕುರಿತು ಮಾತನಾಡಿದ ವಿದ್ಯಾರ್ಥಿನಿ ಸಿಂಚನಾ ಮೊದಲ ಬಾರಿ ಕ್ಲಸ್ಟರ್ ಮಟ್ಟದ ವಸ್ತು ಪ್ರದರ್ಶನದಲ್ಲಿ ನಾನು ಮಾಡಿದ್ದ ಮಾದರಿ ಆಯ್ಕೆಯಾದ ಬಳಿಕ ಹಂತಹಂತವಾಗಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿತು. 2024 ರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪ್ರದಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಜೊತೆ ಸಂಭಾಷಣೆ ನಡೆಸಲು ಅವಕಾಶ ಸಿಕ್ಕಿತು. ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ನರೇಂದ್ರ ಮೋದಿಯವರು ಹಮ್ಮಿಕೊಂಡಿರುವ ಯೋಜನೆಯನ್ನ ನೋಡಿ ನಾನು ಸಹ ಏನಾದರು ಸಾಧನೆ ಮಾಡಬೇಕು ಎನ್ನುವ ದೃಢತೆಯಿಂದ ಈ ಸೋಲಾರ್ ಮಾದರಿಯನ್ನು ತಯಾರಿಸಿದ್ದೇನೆ, ಇದರಿಂದ ಮನೆಗಳಿಗೆ ಸೋಲಾರ್ ವಿದ್ಯುತ್ ಬಳಕೆ ಮಾಡಿಕೊಳ್ಳಬಹುದಾಗಿದೆ, ಇದರಿಂದ ಬಡವರಿಗೆ ಅನುಕೂಲವಾಗಲಿದೆ ಎಂದು ತಿಳಿಸುತ್ತ ಪ್ರಧಾನಿಗಳನ ಭೇಟಿಯಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು