News Karnataka Kannada
Sunday, April 28 2024
ಚಾಮರಾಜನಗರ

ನಾಳೆ ತೆಪ್ಪಕಾಡಿಗೆ ಭೇಟಿ ನೀಡಲಿರುವ ರಾಷ್ಟ್ರಪತಿ: ಗುಂಡ್ಲುಪೇಟೆಯಲ್ಲಿ ಬಿಗಿ ಭದ್ರತೆ

NEW DELHI: The President has given assent to four bills
Photo Credit : News Kannada

ಚಾಮರಾಜನಗರ: ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ತೆಪ್ಪಕಾಡು ಆನೆ ಶಿಬಿರ ಗುಂಡ್ಲುಪೇಟೆ ಗಡಿಭಾಗದಲ್ಲಿ ಬರುವುದರಿಂದ ಜೊತೆಗೆ ಪ್ರವಾಸ ಮಾರ್ಗ ದಿಢೀರ್ ಬದಲಾಗಿ ರಸ್ತೆ ಮಾರ್ಗದಲ್ಲಿ ಸಂಚರಿಸಬೇಕಾದ ಪ್ರಮೇಯ ಬರಬಹುದೆಂದು ಗುಂಡ್ಲುಪೇಟೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಗುಂಡ್ಲುಪೇಟೆ ಹೊರವಲಯದಲ್ಲಿ ಈಗಾಗಲೇ ಹೆಲಿಪ್ಯಾಡ್ ಅನ್ನು ಕೂಡ ನಿರ್ಮಾಣ ಮಾಡಲಾಗಿದೆ.

150 ಪೊಲೀಸ್ ಸಿಬ್ಬಂದಿಗಳ ತಂಡವನ್ನು ಈಗಾಗಲೇ ನಿಯೋಜನೆ ಮಾಡಲಾಗಿದ್ದು, ರೂಟ್ ಮ್ಯಾಪ್ ಪ್ರಕಾರ ಅವರು ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಲಿದ್ದು, ಹವಾಮಾನ ವೈಪರೀತ್ಯಗಳಿಂದ ರಸ್ತೆ ಮೂಲಕ ಸಂಚರಿಸಬೇಕಾದರೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಚಾಮರಾಜನಗರ ಎಸ್‌ಪಿ ಪದ್ಮಿನಿ ಸಾಹು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು