News Karnataka Kannada
Monday, April 29 2024
ಚಾಮರಾಜನಗರ

ಬಾವಿಯೊಳಗೆ ಬಿದ್ದ ಕೊಳಕು ಮಂಡಲ ಹಾವುಗಳ ರಕ್ಷಣೆ

ಬಾವಿಯೊಳಗೆ ಬಿದ್ದು ಒದ್ದಾಡುತ್ತಿದ್ದ ಕೊಳಕು ಮಂಡಲ ಹಾವುಗಳನ್ನು ಬರೋಬ್ಬರಿ 3 ತಾಸು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿರುವ ಘಟನೆ ಯಳಂದೂರಿನಲ್ಲಿ ನಡೆದಿದೆ.
Photo Credit : News Kannada

ಚಾಮರಾಜನಗರ: ಬಾವಿಯೊಳಗೆ ಬಿದ್ದು ಒದ್ದಾಡುತ್ತಿದ್ದ ಕೊಳಕು ಮಂಡಲ ಹಾವುಗಳನ್ನು ಬರೋಬ್ಬರಿ 3 ತಾಸು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿರುವ ಘಟನೆ ಯಳಂದೂರಿನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದ ಬಳೆಪೇಟೆಯ ರಾಜು ಎಂಬವರ ಮನೆ ಸಮೀಪ ಇದ್ದ ಬಾವಿಯಲ್ಲಿ ಭಾರಿ ಗಾತ್ರದ ಎರಡು ವಿಷಪೂರಿತ ಮಂಡಲ ಹಾವುಗಳು ಬಿದ್ದ ವಿಚಾರ ಅರಿತ ಉರಗ ಪ್ರೇಮಿ ಸಂತೇಮರಹಳ್ಳಿಯ ಸ್ನೇಕ್ ಮಹೇಶ್ ಸ್ಥಳಕ್ಕೆ ತೆರಳಿ ಎರಡು ಹಾವುಗಳನ್ನು ರಕ್ಷಣೆ ಮಾಡಿದ್ದಾರೆ.

ರಾತ್ರಿ ವೇಳೆಯಲ್ಲಿ ಬಾವಿಗೆ ಎರಡು ಹಾವುಗಳು ಬಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದವು. ಸ್ನೇಕ್ ಮಹೇಶ್ 3 ತಾಸು ಕಾರ್ಯಾಚರಣೆ ಕೈಗೊಂಡು ಸುರಕ್ಷಿತವಾಗಿ ಮೇಲಕ್ಕೆತ್ತಿ ಹಾವುಗಳನ್ನು ಕಾಡಿಗೆ ಬಿಟ್ಟಿದ್ದಾರೆ.

ವಿಷಪೂರಿತ ಮಂಡಲ ಹಾವುಗಳು: ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸ್ನೇಕ್ ಮಹೇಶ್, ಮಂಡಲ ಹಾವು ಭಾರತದ ಅತ್ಯಂತ ವಿಷಕಾರಿ ನಾಲ್ಕು ಹಾವುಗಳಲ್ಲಿ ಒಂದಾಗಿದೆ. ಭಾರತದಲ್ಲಿ ಹಾವು ಕಡಿತದಿಂದ ಮೃತಪಡುವ ಜನರಲ್ಲಿ ಹೆಚ್ಚಿನ ಜನ ಈ ಕೊಳಕು ಮಂಡಲದ ಜೊತೆಗೆ ನಾಗರಹಾವು, ಕಟ್ಟಾವು ಹಾಗೂ ಗರಸಗ ಮಂಡಲ ಎಂಬ ನಾಲ್ಕು ಹಾವುಗಳ ಕಡಿತದಿಂದ ಮಾತ್ರ ಸಾವನ್ನಪ್ಪುತ್ತಾರೆ. ವಿಷ ರಹಿತವಿರಲಿ ಅಥವಾ ವಿಷಕಾರಿ ಇರಲಿ, ಹಾವುಗಳು ಪರಿಸರದ ಸಮತೋಲನದಲ್ಲಿ ಇತರ ಜೀವಿಗಳಂತೆ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು