News Karnataka Kannada
Monday, May 06 2024
ಚಾಮರಾಜನಗರ

ನೇಹಾ ಹಿರೇಮಠ್‌ ಹತ್ಯೆ ಖಂಡಿಸಿ ವೀರಶೈವ ಘಟಕ ವತಿಯಿಂದ ಬೃಹತ್ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಶ್ ಹತ್ಯೆ ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
Photo Credit : NewsKarnataka

ಚಾಮರಾಜನಗರ : ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಬಳಿ ಜಮಾಯಿಸಿದ ಸಾವಿರಾರು ಜನರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದ ಮುಖ್ಯಗೇಟ್ ಬಳಿ ತೆರಳಿ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.

ಹುಬ್ಬಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಕಾಲೇಜಿನ ಆವರಣದಲ್ಲೇ ನಿರ್ಧಾಕ್ಷಿಣ್ಯವಾಗಿ ಚೂರಿಯಿಂದ
ಇರಿದು ಕೊಲೆ ಮಾಡಿರುವುದು ಇಡೀ ಮನುಷ್ಯ ಕುಲಕ್ಕೆ ಮಾಡಿದ ಅಪಮಾನವಾಗಿದೆ. ಇದರಿಂದ ಇಡೀ ನಾಗರಿಕ ಸಮಾಜವೇ ತಲ್ಲಣಗೊಂಡಿದೆ. ಅಲ್ಲದೇ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸರ್ಕಾರ ಈ ಘಟನೆ ಸಂಬಂಧ ತನಿಖೆಯನ್ನು ತೀವ್ರಗೊಳಿಸಬೇಕು ಎಂದು ಆಗ್ರಹಿಸಿದರು. ಹತ್ಯೆ ಮಾಡಿದ ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ವಿಧಿಸಬೇಕು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆಗೆ ಜವಾಬ್ದಾರಿಯ ಕಾನೂನು ತರಬೇಕು.

ಫಯಾಜ್‌ನನ್ನು ಗಲ್ಲಿಗೇರಿಸಲು ಸಚಿವ ಸಂಪುಟವು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.ಹರವೆ ಮಠದ ಸರ್ಪಭೂಷಣಸ್ವಾಮೀಜಿ, ಚಾಮರಾಜನಗರ ಶ್ರೀಸಿದ್ದಮಲ್ಲೇಶ್ವರ ವಿರಕ್ತ ಮಠದ ಚೆನ್ನಬಸವ ಸ್ವಾಮೀಜಿ, ಮರಿಯಾಲ ಮಠದ ಇಮ್ಮಡಿ ಮುರುಘಾರಾಜೇಂದ್ರಸ್ವಾಮೀಜಿ ಮಾತನಾಡಿ, ನೇಹಾ ಹಿರೇಮಠ ಹತ್ಯೆ ಖಂಡನೀಯ. ಸರ್ಕಾರ ತನಿಖೆಯನ್ನು ಸರಿ ದಾರಿಯಲ್ಲಿ ನಡೆಸಬೇಕು. ಹೆಣ್ಣು ಮಕ್ಕಳು ಮುಕ್ತವಾಗಿ ವಿದ್ಯಾಭ್ಯಾಸ ಮಾಡಲು ಅವಕಾಶ ಕಲ್ಪಿಸಬೇಕು. ಅಲ್ಲದೆ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡಬೇಕು. ಹತ್ಯೆ ಮಾಡಿರುವ ವ್ಯಕ್ತಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು